ಮಧುಗಿರಿ:
ರೈತರ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ರಾಜೇಂದ್ರ ರಾಜಣ್ಣ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.
ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಎರಡನೇ ಸ್ಥಾನ ಗಳಿಸಿ ಪರಾಜಿತರಾಗಿದ್ದ ರಾಜೇಂದ್ರ ಮತ್ತೆ ಸ್ಪರ್ಧಿಸಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳ ಮೂಲಕ ವಿಧಾನ ಪರಿಷತ್ ಸ್ಥಾನಕ್ಕೆ ಒಟ್ಟು ೫೩೨೦ ಕ್ರಮ ಬದ್ಧವಾದ ಮತಗಳಲ್ಲಿ ೩೧೩೫ ಮತಗಳನ್ನು ಪಡೆದು ಪರಿಷತ್ ಸದಸ್ಯರಾಗಿ ಆಯ್ಕೆಯಾದರು.
ಈ ಹಿಂದಿನ ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜು ರವರ ಅಧಿಕಾರಾವಧಿಯು ಜ.೫ ರಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನ ಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ನೂತನವಾಗಿ ಪರಿಷತ್ಗೆ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸಮಾರಂಭದಲ್ಲಿ ರಾಜೇಂದ್ರ ಪ್ರಮಾಣ ವಚನ ಸ್ವೀಕರಿಸಿದರು.
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿದ್ದರು.
ನವದೆಹಲಿಯ ಕ್ರಿಬ್ಕೋ ನಿರ್ದೇಶಕ, ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಯುವ ಕಾಂಗ್ರೆಸ್ ನ ರಾಜ್ಯ ಉಪಾಧ್ಯಕ್ಷರಾಗಿ ಸದಾ ರೈತರ, ಜನಪರವಾದ ಹೋರಾಟಗಳ ಮೂಲಕ ಕೆಲಸ-ಕಾರ್ಯಗಳನ್ನು ಮಾಡುತ್ತಾ ಮಾರಕವಾದ ಕೋವಿಡ್ ಸಂದರ್ಭದಲ್ಲಿ ತಾಲ್ಲÆಕಿನಲ್ಲಿ ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ.
ರೈತರು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳನ್ನು ಖರೀ, ಬಡವರ್ಗದ ಜನರಿಗೆ ವಿತರಣೆ ಮಾಡಿ, ಅವರ ಕಷ್ಟಗಳಿಗೆ ಸ್ಪಂದಿಸಿ ಕಾಂಗ್ರೆಸ್ ಪಕ್ಷದ ಮುಖಂಡರ ಒಮ್ಮತ ಮತ್ತು ಹಿರಿಯ ರಾಜಕಾರಣಿಗಳ ಸಹಕಾರದಿಂದ ಪಕ್ಷಾತೀತ, ಜ್ಯಾತ್ಯತೀತವಾಗಿ ಬಹುಮತ ಗಳಿಸುವ ಮೂಲಕ ಜಿಲ್ಲೆಯನ್ನು ಪ್ರತಿನಿಧಿಸಿ ವಿಧಾನ ಪರಿಷತ್ ಸದಸ್ಯರಾಗಿ ರಾಜೇಂದ್ರ ರಾಜಣ್ಣ ಆಯ್ಕೆಯಾದರು.
ಸಮಾರಂಭಕ್ಕೆ ಕೋವಿಡ್ ಹಿನ್ನೆಲೆಯಲ್ಲಿ ಕೆಲವರಿಗೆ ಮಾತ್ರ ಪಾಸ್ ವಿತರಣೆ ಮಾಡಲಾಗಿತ್ತು ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದ ಜಿಲ್ಲೆಯ ಮುಖಂಡರಿಗೆ ಬೆಂಗಳೂರಿನ ಕೊಡವ ಸಮುದಾಯ ಭವನದಲ್ಲಿ ಕೆಎನ್ಆರ್ ಮತ್ತು ಆರ್ ಆರ್ ಅಭಿಮಾನಿ ಬಳಗದ ವತಿಯಿಂದ ಉಪಾಹಾರ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ, ಟಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ, ಜಿಪಂ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಲ್ಲಿಕಾರ್ಜುನಯ್ಯ,
ಎಸ್.ರಾಜಗೋಪಾಲ್, ಸಹಕಾರ ಯೂನಿಯನ್ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ಪುರಸಭೆಯ ಮಾಜಿ ಅಧ್ಯಕ್ಷ ಎಂ.ಕೆ.ನAಜುAಡಯ್ಯ, ಪುರಸಭೆ ಅಧ್ಯಕ್ಷ ತಿಮ್ಮರಾಯಪ್ಪ, ಸದಸ್ಯರಾದ ಆಲೀಂ, ಲಾಲಪೇಟೆ ಮಂಜುನಾಥ್, ಆಚಾರ್ ಮಂಜುನಾಥ್, ನಟರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು,
ಬಿ.ಜಿ.ಮೂರ್ತಿ, ಮುಖಂಡ ಜಿಪಂ ಮಾಜಿ ಸದಸ್ಯ ಪಾವಗಡ ವೆಂಕಟೇಶ್, ಕಲ್ಲಹಳ್ಳಿ ದೇವರಾಜು, ಸುರೇಶ್, ಎಸ್.ಎನ್ರಾಜು, ಆದಿನಾರಾಯಣರೆಡ್ಡಿ, ಪಂಚಣ್ಣ, ಡಿ.ಹೆಚ್.ನಾಗರಾಜು, ಅನಂದ್, ಎಸ್ಬಿಟಿ ರಾಮು, ಸಾಧಿಕ್, ಉಮೇಶ್, ಜಿಯಾ, ದೊಡ್ಡೇರಿ ಕಣಿಮಯ್ಯ, ದೀಪಕ್ ಹೊನ್ನಾಪುರ, ಗಂಗರಾಜು ಸೇರಿದಂತೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಇದ್ದರು.
