ದೇಶದಲ್ಲಿ ಹೊಸ ತೆರಿಗೆ ನೀತಿ ; ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್

ನವದೆಹಲಿ:

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಫೆ.02) ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಮಂಡಿಸಿದ್ದು, ತೆರಿಗೆ ಪಾವತಿ ಮತ್ತು ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.

ಸಹಕಾರ ಸಂಘಗಳಿಗೆ ಏಕರೂಪದ ತೆರಿಗೆ ನೀತಿ.

ವಿಶೇಷ ಚೇತನ ಮಕ್ಕಳ ಪೋಷಕರಿಗೆ ತೆರಿಗೆ ವಿನಾಯ್ತಿ ನೀಡಲಾಗಿದೆ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ. ತೆರಿಗೆ ಪಾವತಿಯಲ್ಲಾದ ತಪ್ಪು ಸರಿಪಡಿಸಲು 2 ವರ್ಷಗಳ ಕಾಲಾವಕಾಶ ನೀಡಿದ ಕೇಂದ್ರ ಸರ್ಕಾರ.

ಕೇಂದ್ರ, ರಾಜ್ಯ ಸರ್ಕಾರ ನೌಕರರಿಗೆ ಏಕರೂಪದ ತೆರಿಗೆ. ಸಹಕಾರ ಸಂಘಗಳ ಮೇಲಿನ ಸರ್ ಚಾರ್ಜ್ ಇಳಿಕೆ. ಶೇ.12ರಿಂದ ಶೇ.7ಕ್ಕೆ ಸರ್ ಚಾರ್ಜ್ ಇಳಿಕೆ ಮಾಡಿದ ಕೇಂದ್ರ ಸರ್ಕಾರ. ಮುಂದಿನ ವರ್ಷದವರೆಗೂ ಸ್ಟಾರ್ಟ್ ಅಪ್ ಗಳಿಗೆ ತೆರಿಗೆ ವಿನಾಯ್ತಿ.

*ಡಿಜಿಟಲ್ ಆಸ್ತಿ ಮೇಲೆ ಶೇ.30ರಷ್ಟು ತೆರಿಗೆ

*ಸಹಕಾರ ಸಂಘಗಳಿಗೆ ತೆರಿಗೆ ರಿಲೀಫ್

*ಕ್ರಿಫ್ಟೋ ಕರೆನ್ಸಿ ಮೇಲೆ ತೆರಿಗೆ ಘೋಷಣೆ

*ರಾಜ್ಯ ಕೇಂದ್ರ ಸರ್ಕಾರ ನೌಕರರ ಟಿಡಿಎಸ್ ಶೇ.10ರಿಂದ 14ಕ್ಕೆ ಏರಿಕೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link