ದಾವಣಗೆರೆ:
ದಾವಣಗೆರೆಯಲ್ಲಿ ನಾಪತ್ತೆಯಾಗಿ ರೈಲಿನ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದ ಮೂವರು ಬಾಲಕಿಯರನ್ನು ಹುಬ್ಬಳ್ಳಿ ರೈಲ್ವೆ ಠಾಣೆಯ ಪೊಲೀಸರು ಹಾಗೂ 112 ಸಿಬ್ಬಂದಿ ರಕ್ಷಿಸಿದ್ದಾರೆ.
ದಾವಣಗೆರೆಯ ಖಾಸಗಿ ಶಾಲೆಯೊಂದರಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಯರು ಮಂಗಳವಾರ ಪಾಲಕರು ಹಾಗೂ ಶಿಕ್ಷಕರಿಗೆ ಹೇಳದೆ ನಾಪತ್ತೆಯಾಗಿದ್ದರು.
ಈ ಕುರಿತು ಅವರ ಪಾಲಕರು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಲಕಿಯರು ಸಂಜೆ ದಾವಣೆಗೆರೆಯಿಂದ ಹುಬ್ಬಳ್ಳಿ ರೈಲು ಹತ್ತಿರುವ ಸುಳಿವು ಪೊಲೀಸರಿಗೆ ಸಿಕ್ಕಿತ್ತು.
ಕೂಡಲೇ ಹುಬ್ಬಳ್ಳಿ ಪೊಲೀಸರಿಗೆ ಫೋಟೋ ಸಹಿತ ಮಾಹಿತಿ ನೀಡಿದ್ದರು. ಹುಬ್ಬಳ್ಳಿ ರೈಲ್ವೆ ಠಾಣೆ ಪಿಎಸ್ಐ ಸತ್ಯಪ್ಪ ಮುಕ್ಕಣ್ಣವರ, ಶಹರ ಠಾಣೆಯ 112 (ಹೊಯ್ಸಳ) ಸಹಾಯವಾಣಿಯ ಸುಧೀಂದ್ರ ಗಡ ಹಾಗೂ ಸಿಬ್ಬಂದಿ, ರೈಲು ಬರುತ್ತಿದ್ದಂತೆ ಬಾಲಕಿಯರನ್ನು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಬುಧವಾರ ದಾವಣೆಗೆರೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/02/Capture-28.gif)