![BIGG BREAKING NEWS: 'ಸಿಡಿ ಪ್ರಕರಣ'ದಲ್ಲಿ 'ಶಾಸಕ ರಮೇಶ್ ಜಾರಕಿಹೊಳಿ'ಗೆ ಬಿಗ್ ರಿಲೀಫ್: SITಯಿಂದ ನ್ಯಾಯಾಲಯಕ್ಕೆ 'ಬಿ-ರಿಪೋರ್ಟ್' ಸಲ್ಲಿಕೆ | MLA Ramesh Jarkiholi](https://assets-news-bcdn.dailyhunt.in/cmd/resize/750x490_90/fetchdata16/images/ca/9f/8e/ca9f8e66c27afac7fa4ae00c143c0a1ca3b8fb56709bfbed07da2da633a55ca1.webp)
ರಾಜ್ಯ ರಾಜಕೀಯದಲ್ಲಿ ಸಂಚಲವನ್ನೇ ಸೃಷ್ಠಿಸಿದ್ದಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ತನಿಖೆ ನಡೆಸುತ್ತಿದ್ದಂತ ಎಸ್ಐಟಿ ಅಧಿಕಾರಿಗಳು ಈಗ ನ್ಯಾಯಾಲಯಕ್ಕೆ ಬಿ-ರಿಪೋರ್ಸ್ ಸಲ್ಲಿಸಿರೋದಾಗಿ ತಿಳಿದು ಬಂದಿದೆ.
ಹೀಗಾಗಿ ಶಾಸಕ ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಸಂಬಂಧ ವಿವಿಧ ಹಂತದಲ್ಲಿ ತನಿಖೆ ನಡೆಸಿದ್ದಂತ ವಿಶೇಷ ತನಿಖಾಧಿಕಾರಿಗಳ ತಂಡ (ಎಸ್ಐಟಿ ) ನ್ಯಾಯಾಲಯಕ್ಕೆ ನಿನ್ನೆ ತನಿಖಾವರದಿ ಸಲ್ಲಿಸೋದಕ್ಕೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದ್ದಂತ ನ್ಯಾಯಾಲಯವು ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಇಂದು ಎಸ್ಐಟಿ ತನಿಖಾಧಿಕಾರಿಗಳಿಂದ ನಗರದ 1ನೇ ಎಸಿಎಂಎಂ ಕೋರ್ಟ್ ಗೆ ವರದಿಯನ್ನು ಸಲ್ಲಿಸಿದೆ.
ನ್ಯಾಯಾಲಯಕ್ಕೆ ಎಸ್ಐಟಿ ತನಿಖಾಧಿಕಾರಿಗಳಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳಿಂದ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ ಕಾರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/02/Capture-45.gif)