ಪಾಕಿಸ್ತಾನ:
ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕೊಂಡಿದ್ದ ಪಾಕ್ ವಿದ್ಯಾರ್ಥಿ ರಕ್ಷಣೆ ಮಾಡಿ, ಸುರಕ್ಷಿತ ಜಾಗಕ್ಕೆ ಕರೆತರುವಲ್ಲಿ ಭಾರತೀಯ ರಾಯಭಾರ ಕಚೇರಿ ಯಶಸ್ವಿಯಾಗಿದ್ದು, ಪ್ರಧಾನಿ ಮೋದಿಗೆ ಪಾಕ್ನ ವಿದ್ಯಾರ್ಥಿನಿ ಅಸ್ಮಾ ಧನ್ಯವಾದ ತಿಳಿಸಿದ್ದಾರೆ.
ರಷ್ಯಾ-ಉಕ್ರೇನ್ ಸಂಘರ್ಷದಿಂದಾಗಿ ಭಾರತ ಸೇರಿದಂತೆ ಅನೇಕ ದೇಶದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕೊಂಡಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಬಹುತೇಕ ವಿದ್ಯಾರ್ಥಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಇದರಲ್ಲಿ ಪಾಕಿಸ್ತಾನದ ವಿದ್ಯಾರ್ಥಿನಿ ಅಸ್ಮಾ ಶಫೀಕ್ ಸಹ ಸೇರಿಕೊಂಡಿದ್ದಾರೆ.
ಮೋದಿ, ಭಾರತೀಯ ರಾಯಭಾರ ಕಚೇರಿಗೆ ಧನ್ಯವಾದ ಹೇಳಿದ ಅಸ್ಮಾ ಉಕ್ರೇನ್ ರಾಜಧಾನಿ ಕೀವ್ನಲ್ಲಿ ವ್ಯಾಸಂಗ ಮಾಡ್ತಿದ್ದ ಪಾಕ್ನ ಅಸ್ಮಾ ಶಫೀಕ್ ಅವರನ್ನ ಭಾರತೀಯ ರಾಯಭಾರ ಕಚೇರಿ ಸುರಕ್ಷಿತವಾಗಿ ಸ್ಥಳಾಂತರ ಮಾಡಿದೆ.
ಕೇಂದ್ರ ಸರ್ಕಾರ ಭಾರತೀಯ ವಿದ್ಯಾರ್ಥಿಗಳ ಜೊತೆಗೆ ನೇಪಾಳ ಹಾಗೂ ಪಾಕಿಸ್ತಾನದ ಅನೇಕ ವಿದ್ಯಾರ್ಥಿಗಳನ್ನ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದೆ. ತಮ್ಮ ದೇಶಗಳ ರಾಯಭಾರ ಕಚೇರಿ ಸರಿಯಾಗಿ ಸ್ಪಂದನೆ ನೀಡದ ಕಾರಣಕ್ಕಾಗಿ ವಿದ್ಯಾರ್ಥಿಗಳು ಆಕ್ರೋಶ ಸಹ ವ್ಯಕ್ತಪಡಿಸಿದ್ದಾರೆ.
ಇನ್ನು ಉಕ್ರೇನ್ನಲ್ಲಿ ಸಂಘರ್ಷ ಉಂಟಾಗುತ್ತಿದ್ದಂತೆ ಬೇರೆ ಬೇರೆ ದೇಶಗಳ ವಿದ್ಯಾರ್ಥಿಗಳು ಭಾರತದ ಬಾವುಟ ಕೈಯಲ್ಲಿ ಹಿಡಿದು ಸುರಕ್ಷಿತ ಸ್ಥಳಗಳಿಗೆ ತೆರಳಿರುವ ಘಟನೆಗಳು ಸಹ ವರದಿಯಾಗಿದ್ದನ್ನು ನಾವೆಲ್ಲ ಕೇಳಿದ್ದೇವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ