ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ

ತುಮಕೂರು:

       ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಂಡತಿಯ ಕಾಲು ಕತ್ತರಿಸಿದ್ದೇನೆ, ಆಸ್ಪತ್ರೆಗೆ ಸೇರಿಸಬೇಕು ಅಂತ ಬಾಬು ಹೇಳಿಕೊಂಡಿದ್ದಾನೆ. ಸದ್ಯ ಆರೋಪಿ ತುಮಕೂರು ನಗರ ಪೊಲೀಸರ ವಶದಲ್ಲಿದ್ದು, ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿಯ  ಕಾಲು  ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡಿದ್ದಾನೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು, ಪತಿ ಬಾಬುನನ್ನು (34) ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ಕು ವರ್ಷದ ಹಿಂದೆ ಬಾಬು ಅನಿತಾಳನ್ನು ಮದುವೆಯಾಗಿದ್ದ. ಬೆಳಗ್ಗೆ 6 ಗಂಟೆ ಹೊತ್ತಿಗೆ ಅಶೋಕ ಲಾಡ್ಜ್​ಗೆ ದಂಪತಿ ಬಂದಿತ್ತು. ಬ್ಯಾಗ್​ನಲ್ಲಿ ಬಾಬು ಮಚ್ಚು ತೆಗೆದುಕೊಂಡು ಬಂದಿದ್ದ. ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದಲ್ಲೇ ಹೆಂಡತಿಯನ್ನು ಲಾಡ್ಜ್​ಗೆ ಕರೆದುಕೊಂಡು ಬಂದಿದ್ದ.

ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಂಡತಿಯ ಕಾಲು ಕತ್ತರಿಸಿದ್ದೇನೆ, ಆಸ್ಪತ್ರೆಗೆ ಸೇರಿಸಬೇಕು ಅಂತ ಬಾಬು ಹೇಳಿಕೊಂಡಿದ್ದಾನೆ. ಸದ್ಯ ಆರೋಪಿ ತುಮಕೂರು ನಗರ ಪೊಲೀಸರ ವಶದಲ್ಲಿದ್ದು, ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

https://youtu.be/3yWBst5CBuA

 

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap