ಪಟ್ನಾ:

ಹಲವೆಡೆ ಹಿಂದೂ- ಮುಸ್ಲಿಮರ ನಡುವೆ ಸಾಮರಸ್ಯ ಕೆದಡುವ ಪ್ರಯತ್ನಗಳು ನಡೆಯುತ್ತಿರುವ ನಡುವೆಯೇ ಬಿಹಾರದಲ್ಲಿ ಅಮೋಘ ಕಾರ್ಯವೊಂದು ನಡೆದಿದೆ. ಬಿಹಾರ್ನ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯಕ್ಕೆ ಮುಸ್ಲಿಂ ಕುಟುಂಬವೊಂದು ಭೂಮಿಯನ್ನು ದಾನ ಮಾಡಿದೆ.
ವಿರಾಟ್ ರಾಮಾಯಣ ಮಂದಿರ ಇದಾಗಿದ್ದು, ಇದರ ನಿರ್ಮಾಣಕ್ಕೆ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ಗುವಾಹಟಿ ಮೂಲದ ಪೂರ್ವ ಚಂಪಾರಣ್ನ ಉದ್ಯಮಿ ಇಷ್ತಿಯಾಕ್ ಅಹ್ಮದ್ ಖಾನ್ ನೀಡಿದ್ದಾರೆ.
ಕೆಲಸ ಮುಗಿಸಿ ಮಧ್ಯರಾತ್ರಿ 10 ಕಿ.ಮೀ ಓಡಿ ಮನೆ ಸೇರುವ ಯುವಕನಿಗೆ ಸೇನಾಧಿಕಾರಿ ನೀಡಿದ್ರು ಬಂಪರ್ ಆಫರ್!
ಯೋಜನೆಯನ್ನು ಕೈಗೆತ್ತಿಕೊಂಡಿರುವ ಪಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. ತಮ್ಮ ಕುಟುಂಬಕ್ಕೆ ಸೇರಿದ ಭೂಮಿಯನ್ನು ಅವರು ದಾನವಾಗಿ ನೀಡಿದ್ದು, ಇದಕ್ಕೆ ಸಂಬಂಧಿಸಿದ ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ವಿವರಣೆ ನೀಡಿದರು.
ಮಹಾವೀರ ಮಂದಿರ ಟ್ರಸ್ಟ್ ಈ ದೇವಸ್ಥಾನ ನಿರ್ಮಾಣಕ್ಕಾಗಿ ಇದುವರೆಗೆ 125 ಎಕರೆ ಭೂಮಿಯನ್ನು ಪಡೆದುಕೊಂಡಿದೆ. ಟ್ರಸ್ಟ್ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಇನ್ನೂ 25 ಎಕರೆ ಭೂಮಿಯನ್ನು ಪಡೆಯಲಿದೆ ಎಂದರು.
ಪದ್ಮಶ್ರೀ ಪುರಸ್ಕೃತ 125 ವರ್ಷದ ಯೋಗ ಗುರು ಸ್ವಾಮಿ ಶಿವಾನಂದರ ಬದುಕಿನ ಸ್ಫೂರ್ತಿದಾಯಕ ಪಯಣವಿದು!
ಅಂದಹಾಗೆ ವಿರಾಟ್ ರಾಮಾಯಣ ಮಂದಿರವು 215 ಅಡಿ ಎತ್ತರವಿರುವ ಕಾಂಬೋಡಿಯಾದ 12 ನೇ ಶತಮಾನದ ವಿಶ್ವಪ್ರಸಿದ್ಧ ಅಂಕೋರ್ ವಾಟ್ ಸಂಕೀರ್ಣಕ್ಕಿಂತ ಎತ್ತರವಾಗಿದೆ. 500 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ, ಪೂರ್ವ ಚಂಪಾರಣ್ನಲ್ಲಿರುವ ಸಂಕೀರ್ಣವು ಎತ್ತರದ ಗೋಪುರಗಳೊಂದಿಗೆ 18 ದೇವಾಲಯಗಳನ್ನು ಒಳಗೊಂಡಿರುತ್ತದೆ ಮತ್ತು ಅದರ ಶಿವ ದೇವಾಲಯವು ವಿಶ್ವದ ಅತಿದೊಡ್ಡ ಶಿವಲಿಂಗವನ್ನು ಹೊಂದಿರುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








