ಹೊಸಪೇಟೆ:
ಹೊಸಪೇಟೆಯಲ್ಲಿ ಇಂದು ಮತ್ತು ನಾಳೆ ನಡೆಯುವ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿಗೆ ಕಾಂಗ್ರೆಸ್ ಪ್ರತಿಭಟನೆಯ ಬಿಸಿ ತಟ್ಟಿತು.ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಹೊಸಪೇಟೆಯಲ್ಲಿಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಪೊಲೀಸರು ಶಾಸಕರು, ಮಾಜಿ ಶಾಸಕರು, ಮುಖಂಡರು ಸೇರಿದಂತೆ ನೂರಕ್ಕೂ ಹೆಚ್ವು ಜನರನ್ನು ವಶಕ್ಕೆಪಡೆದುಕೊಂಡರು.
KGF 2 : ಹಿಂದಿ ಬಾಕ್ಸ್ ಆಫೀಸ್ ನಲ್ಲಿ ರಾಕಿ ಭಾಯ್ ಡಾಮಿನೇಷನ್ : 2 ನೇ ದಿನದ ಕಲೆಕ್ಷನ್..!!
ಬಿಜೆಪಿಯಬರಾಜ್ಯ ಕಾರ್ಯಕಾರಿಣಿ ಸಭೆ ಆರಂಭವಾಗುವ ಮುನ್ನ ಕಾಂಗ್ರೆಸ್ ನ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಗೊಂಡಿತು.ಆತ್ಮಹತ್ಯೆಗೆ ಪ್ರಚೋದನೆ ಹಿನ್ನೆಲೆಯಲ್ಲಿ ಐಪಿಸಿ 306 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲು ಆಗ್ರಹಿಸಿದರು.
ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 13ಎ ಅಡಿಯಲ್ಲಿಯೂ ಕೇಸ್ ದಾಖಲಿಸಲು ಕಾಂಗ್ರೆಸ್ ಪಟ್ಟು ಹಿಡಿಯಿತು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕಟ್ಟಡಗಳನ್ನು ಲೋಕಾರ್ಪಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇಲ್ಲಿನ ಕನಕದಾಸ ವೃತ್ತದಿಂದ ಭಟ್ರಹಳ್ಳಿ ಆಂಜನೇಯ ದೇವಾಲಯದವರೆಗೂ ಪ್ರತಿಭಟನೆ ನಡೆಸಲು ಮುಂದಾದಾಗ ಈ ಮೊದಲೇ ಜಮಾಯಿಸಿದ್ದ ಪೊಲೀಸರು.ಎಐಸಿಸಿ ಪ್ರಧಾನ ಕಾರ್ಯದರ್ಶಿಎಚ್. ಕೆ. ಪಾಟೀಲ. ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಭೀಮಾನಾಯ್ಕ, ಈ ತುಕರಾಂ, ಮಾಜಿ ಸಂಸದ ಉಗ್ರಪ್ಪ, ಮಾಜಿ ಸಚಿವ ಸಂತೋಷ್ ಲಾಡ್ ಸೇರಿದಂತೆ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
