ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ನೇಮಕ

ಬೆಂಗಳೂರು:

ಕನ್ನಡಿಗರಾದ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ & ಸಂಭ್ರಮದ ಸಂದರ್ಭ. ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್‌ ಬಿ.ಎಸ್.ರಾಜು ಅವರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಡೀ ವಿಶ್ವದಲ್ಲೇ ಭಾರತದಲ್ಲಿ ಅತಿಹೆಚ್ಚು ಬಾರಿ ಇಂಟರ್ನೆಟ್ ಸೇವೆ ಸ್ಥಗಿತ

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ʼಆಪರೇಷನ್‌ ಪರಾಕ್ರಮʼ ಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು. ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್‌ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link