‘ಪಿಎಸ್‌ಐ ನೇಮಕಾತಿ ಅಕ್ರಮ’ದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ: ‘ಶಿಕ್ಷಕರ ನೇಮಕಾತಿ ಪರೀಕ್ಷೆ’ ವೇಳೆ, ಈ ಎಲ್ಲವೂ ಬ್ಯಾನ್.!

ಬೆಂಗಳೂರು:

545 ಪಿಎಸ್‌ಐ ನೇಮಕಾತಿ ಅಕ್ರಮ ಬೆಳಕಿಗೆ ಬಂದನ ನಂತ್ರ, ಇದೀಗ ಮೇ.21, 22ರಂದು 15,000 ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಶಿಕ್ಷಣ ಇಲಾಖೆ ಪುಲ್ ಅಲರ್ಟ್ ಆಗಿದೆ.ಇದೇ ಕಾರಣದಿಂದ ಕೆಲ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ತರೋದಕ್ಕೆ ನಿರ್ಬಂಧ ವಿಧಿಸಿದೆ.

ಕುತೂಹಲ ಮೂಡಿಸಿದೆ ಐಪಿಎಲ್ ಪ್ಲೇಆಫ್​ ರೇಸ್; ಹೀಗಿದೆ ಲೆಕ್ಕಾಚಾರ

ಈ ಸಂಬಂಧ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದ ಸಭೆ ನಡೆಸಿದರು. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತಂತೆ ಚರ್ಚಿಸಿದರು. ಅಧಿಕಾರಿಗಳು, ಪೊಲೀಸ್ ಇಲಾಖೆ ನೀಡಿದಂತ ಸಲಹೆಗಳ ಕುರಿತಂತೆಯೂ ಚರ್ಚೆ ನಡೆಸಲಾಯಿತು.

ಮತ್ತೊಂದು ದಾಖಲೆ: 25ನೇ ದಿನಕ್ಕೆ ರಾಜಮೌಳಿಯ RRR ಕಲೆಕ್ಷನ್’ಗೆ ಸೆಡ್ಡು ಹೊಡೆದ ‘KGF 2’

ಸಭೆಯ ಬಳಿಕ ಮಾತನಾಡಿದಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳೋ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಕೇಂದ್ರಗಳಿಗೆ ವಾಚ್ ಕಟ್ಟಿ ಅಭ್ಯರ್ಥಿಗಳು ಬರುವಂತಿಲ್ಲ. ಆಧುನಿಕ ತಂತ್ರಜ್ಞಾನದ ಯಾವುದೇ ಉಪಕರಣಗಳನ್ನು ತರೋದಕ್ಕೂ ಅವಕಾಶವಿಲ್ಲ ಎಂದರು.

 ಪೆಟ್ರೋಲ್ ಬಾಂಬ್ ತಯಾರು, ಪೊಲೀಸರನ್ನ ಯಾಮಾರಿಸಲು ಹೋಗಿ ಸಿಕ್ಕಿಬಿದ್ದ ಗ್ಯಾಂಗ್

ಪೊಲೀಸ್ ಇಲಾಖೆಯಿಂದ ನೀಡಿರುವಂತ ಸಲಹೆಗಳನ್ನು ಪಾಲಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಂತ್ರಜ್ಞಾನ, ಮತ್ತಿತರ ಪರಿಕರಣಗಳನ್ನು ಪರೀಕ್ಷಾ ಕೊಠಡಿಗಳ ಒಳಗೆ ಕೊಂಡೊಯ್ಯೋದನ್ನು ನಿಷೇಧಿಸಲಾಗಿದೆ ಎಂಬುದಾಗಿ ಹೇಳಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link