ಬೆಂಗಳೂರು
ಅವರ ಸಮೀಕ್ಷೆಯಲ್ಲಿ ಅವರಿಗೆ ಸೋಲು ಖಚಿತವಾಗಿದೆ ಅದಕ್ಕಾಗಿ ಅವರು ಈಗ ಟಿಪ್ಪು, ರಾಣಿ ಅಬ್ಬಕ್ಕ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಮಿತ್ ಶಾ ಅವರಿಗೆ ರಾಣಿ ಅಬ್ಬಕ್ಕ ಯಾರು ಅವರ ಇತಿಹಾಸವೇನು ಎಂದು ಗೊತ್ತೇ ಇಲ್ಲ. ಬೇಕಾದರೆ ಅವರನ್ನು ಕರೆಸಿ ಅವರ ಇತಿಹಾಸ ಏನು ಎಂದು ಹೇಳಲಿ ಎಂದು ಸವಾಲು ಹಾಕುತ್ತೇನೆ ಎಂದರು.
ಬಿಜೆಪಿ ಸರ್ಕಾರ ಚಿಲುಮೆ ಸಂಸ್ಥೆ ಮೂಲಕ ಮತದಾರರ ಪಟ್ಟಿ ಅಕ್ರಮ ಮಾಡಿದ ನಂತರ ಈಗ ರಾಜ್ಯದ ಬೇರೆ ಕ್ಷೇತ್ರಗಳಲ್ಲಿ ಬೇರೆ ರೀತಿಯ ಅಕ್ರಮಕ್ಕೆ ಮುಂದಾಗಿದ್ದು, ಈ ಕುರಿತು ಇಂದು ರಾಜ್ಯ ಮುಖ್ಯಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇವೆ. ರಾಜ್ಯದ 46ನೆ ವಿಧಾನ ಸಭಾ ಕ್ಷೇತ್ರವಾಗಿರುವ ಆಳಂದದಲ್ಲಿ ಆನ್ ಲೈನ್ ಮೂಲಕ 6670 ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದೇ ಮತದಾರರ ಪಟ್ಟಿಯಿಂದ ಹೆಸರು ರದ್ದು ಮಾಡುವಂತೆ ಅರ್ಜಿ ಹಾಕಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ