ಬೆಂಗಳೂರು
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ. ಈ ಭಾರಿ ಬಿಜೆಪಿಗೆ ಮತ್ತೊಬ್ಬ ನಾಯಕ ಶಾಕ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಇಬ್ಬರು ವಿಧಾನಪರಿಷತ್ ಶಾಸಕರು ಮತ್ತು ಒಬ್ಬರ ಶಾಸಕರು ಕೇಸರಿ ಪಡೆ ಬಿಟ್ಟು ಬೇರೆ ಪಕ್ಷ ಸೇರಿದ್ದರು. ಇದೀಗ ಮತ್ತೊಬ್ಬರಾದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಾವು ಬಿಜೆಪಿಯಲ್ಲಿನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಬಿಜೆಪಿಯ ಹಿರಿಯ ಮುಖಂಡರಾದ ಆಯನೂರು ಮಂಜುನಾಥ್ ಅವರಿಗೆ ಶಾಸಕರಾಗಿ, ಲೋಕಸಭೆ ಸದಸ್ಯರಾಗಿ (ಸಂಸದ) ಸೇವೆ ಮಾಡಿದ ಅನುಭವ ಹೊಂದಿದ್ದಾರೆ. ಇವರು ಶಿವಮೊಗ್ಗ ಕ್ಷೇತ್ರದಿಂದ ಕಣ್ಣಕ್ಕಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಪಕ್ಷದ ನಾಯಕರಿಂದ ಟಿಕೆಟ್ ನೀಡುವ ಬಗ್ಗೆ ಯಾವುದೇ ಸ್ಪಂದನೆ ದೊರತಿಲ್ಲ. ಹೀಗಾಗಿ ಅವರು ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಆಯನೂರು ಮಂಜುನಾಥ್ ಅವರ ಈ ನಿರ್ಧಾರದಿಂದ ಬಿಜೆಪಿ ಭದ್ರಕೋಟೆ ಎನ್ನಲಾಗುವ ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಇಲ್ಲವೇ ಚುನಾವಣೆ ಸಂದರ್ಭದಲ್ಲಿ ಒಂದಷ್ಟು ಕೆಟ್ಟ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಇದ್ಯಾವುದನ್ನು ತಲೆ ಕೆಡಿಸಿಕೊಳ್ಳದ ಬಿಜೆಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು 2023ರ ಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ನಿರ್ಧರಿಸಿದೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಇನ್ನೇನು ಬಿಡುಗಡೆಯಾಗಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ