ಹುಬ್ಬಳ್ಳಿ
ನಾನು ಹಲವಾರು ದಿನಗಳಿಂದ ವೇದನೆ ಪಡುತ್ತಿದ್ದೇನೆ. ಹಲವು ನಾಯಕರ ಬಗ್ಗೆ ನಾನು ಮಾತನಾಡಬೇಕಿದೆ. ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇನೆ. ನಾನು ಮಾತನಾಡದೇ ಇದ್ದರೆ ಮುಂದೆ ಸಮಸ್ಯೆ ಎದುರಾಗಲಿದೆ ಎಂದರು.

ಹುಬ್ಬಳ್ಳಿ
ನಾನು ಹಲವಾರು ದಿನಗಳಿಂದ ವೇದನೆ ಪಡುತ್ತಿದ್ದೇನೆ. ಹಲವು ನಾಯಕರ ಬಗ್ಗೆ ನಾನು ಮಾತನಾಡಬೇಕಿದೆ. ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇನೆ. ನಾನು ಮಾತನಾಡದೇ ಇದ್ದರೆ ಮುಂದೆ ಸಮಸ್ಯೆ ಎದುರಾಗಲಿದೆ ಎಂದರು.
ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಜಯ ಸಾಧನೆ ಮಾಡಲು ನಾನು ಶ್ರಮಿಸಿದ್ದೇನೆ. ನನಗೆ ಕಲ್ಯಾಣ ಕರ್ನಾಟಕ ಸೇರಿ ಹಲವಾರು ಜವಬ್ದಾರಿ ಕೊಟ್ಟಿದ್ದಾರೆ. ನಾನು ಅದನ್ನು ನಿಭಾಯಿಸಿದ್ದೇನೆ. ಪಕ್ಷದ ಸೇವೆಯನ್ನು ನಿಷ್ಠೆಯಿಂದ ಮಾಡಿದ್ದೇನೆ. ಉತ್ತರ ಕರ್ನಾಟಕದಲ್ಲಿ ಮೂನೇ ಸ್ಥಾನದಲ್ಲಿ ಬಿಜೆಪಿ ಇತ್ತು. ಎಲ್ಲಾ ಜವಬ್ದಾರಿಗಳನ್ನು ಅಚ್ಚುಕಟ್ಟಾಗಿ ಮಾಡಿದ್ದೇನೆ. ಆದರೂ ಪಕ್ಷ ನನ್ನನ್ನು ಕಡೆಗಣಿಸಿದ ರೀತಿ ನನಗೆ ಬೇಸರ ತಂದಿದೆ ಎಂದರು.
ನನ್ನನ್ನು ಕರೆದು ಸೌಜನ್ಯದಿಂದ ಮಾತನಾಡಲಿಲ್ಲ. ಚಿಕ್ಕ ಹುಡುಗನಿಗೆ ಹೇಳಿದಂತೆ ಟಿಕೆಟ್ ಇಲ್ಲ ಎಂದು ನನಗೆ ಹೇಳಿದರು. ಶೆಟ್ಟರ್ ಲಿಂಗಾಯತ ಅಲ್ಲ ಅಂತ ಕೆಲವರು ಮಾತನಾಡುತ್ತಾರೆ. ಟಿಕೆಟ್ ತೆಗೆದುಕೊಳ್ಳುವುದು ಮುಖ್ಯ ಅಲ್ಲ. ನನ್ನನ್ನು ಕಡೆಗಣಿಸಿದ ರೀತಿ ನನಗೆ ಸರಿ ಎನಿಸಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಕೆಲ ನಾಯಕರಿಂದ ಷಡ್ಯಂತ್ರ ನಡೆದಿದೆ ಎಂದು ಕಿಡಿ ಕಾರಿದರು.




