UPSCಯಲ್ಲಿ ದಾವಣಗೆರೆಯ ಅವಿನಾಶಗೆ 31ನೇ ರ‍್ಯಾಂಕ್‌..!

ಬೆಂಗಳೂರು: 

     ಕೇಂದ್ರ ಲೋಕ ಸೇವಾ ಆಯೋಗವು  2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ದಾವಣಗೆರೆಯ ಅವಿನಾಶ್ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದಿದ್ದಾರೆ.

    ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ಕರ್ನಾಟಕದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ದಾವಣಗೆರೆ ಮೂಲದ ಅವಿನಾಶ್‌ ವಿ. 31ನೇ ರ‍್ಯಾಂಕ್‌ ಪಡೆದು ರಾಜ್ಯಕ್ಕೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ. ಅವಿನಾಶ್ ಬೆಂಗಳೂರಿನ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.
 
    ಇನ್ನುಳಿದಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರ ತಾಂಡಾದವರಾದ ಶೃತಿ ಯರಗಟ್ಟಿ 362ನೇ ರ್ಯಾಂಕ್, ಬಿವಿ ಶ್ರೀದೇವಿಗೆ 525ನೇ ರ್ಯಾಂಕ್, ಆದಿನಾಥ್ ಪದ್ಮಣ್ಣಗೆ 566ನೇ ರ್ಯಾಂಕ್, ಐಎನ್ ಮೇಘನಾ 617ನೇ ರ್ಯಾಂಕ್ ಪಡೆದಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link