ಮೂಲ್ಕಿ : ದೇವಸ್ಥಾನಕ್ಕೆ ನುಗ್ಗಿದ ಮಳೆ ನೀರು

ಮಂಗಳೂರು:

     ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಮಳೆ ನೀರು ತುಂಬಿ, ದೇವಸ್ಥಾನ ಜಲಾವೃತಗೊಂಡಿದೆ.ದೇವಲಾಯದ ಒಳಗೆ ಭಕ್ತರಿಗೆ ಪ್ರದರ್ಶಿಣ ಬರಲು ಅಸಾಧ್ಯವಾಗಿದೆ. ಸಂಜೆ ವೇಳೆ ಪಂಪ್ ಮೂಲಕ ನೀರನ್ನು ತೆರವು ಮಾಡುವ ಕೆಲಸ ಮಾಡಲಾಯಿತು.

    ಕುಕ್ಕೆ ಸುಬ್ರಹ್ಮಣ್ಯದಲ್ಲೂ ನಿನ್ನೆ ಮುಂಜಾನೆಯಿಂದ ಮಳೆ ಬಿರುಸುಗೊಂಡಿತ್ತು. ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಎಡೆಬಿಡದೆ ಮಳೆ ಸುರಿಯಿತು.ಘಟ್ಟ ಭಾಗಗಳಾದ ಬಿಸಿಲೆ, ಸೋಮವಾರಪೇಟೆ ಹಾಗೂ ಮಲ್ಲಹಳ್ಳಿ ಫಾಲ್ಸ್ ಮತ್ತು ಕುಮಾರ ಪರ್ವತ ಭಾಗದಲ್ಲಿ ಕೂಡ ಭಾರೀ ಮಳೆ ಸುರಿದ ಪರಿಣಾಮ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
 
     ನೀರು ಹರಿವು ಹೆಚ್ಚಳದಿಂದ ನದಿಯ ಕಿಂಡಿ ಅಣಕಟ್ಟು ಮುಳುಗುವ ಸಾಧ್ಯತೆ ಹೆಚ್ಚಾಗಿದೆ. ಸ್ನಾನಘಟ್ಟ ಕೂಡ ಭಾಗಶಃ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದ ಬಳಿ ತೆರಳದಂತೆ ಭಕ್ತರಿಗೆ ಮನವಿ ಮಾಡಲಾಗಿದೆ. ಅಲ್ಲದೆ, ಹವಾಮಾನ ಇಲಾಕೆ ಕೂಡ ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಿದೆ.
     ಕುಮಾರಧಾನ ನದಿಯಲ್ಲಿ ನೀರಿನ ಮಟ್ಟ ಏರಿಳಿತವಾಗುತ್ತಿದೆ. ನಿರಂತರ ಮಳೆ ಸುರಿದರೆ ಕಿಂಡಿ ಅಣೆಕಟ್ಟು ಹಾಗೂ ಕುಮಾರಧಾನ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗುವ ಸಾಧ್ಯತೆಗಳಿವೆ. ಕುಮಾರಧಾನ ನದಿಯ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.

     ಈ ನಡುವೆ ಜಿಲ್ಲಾ ಆಡಳಿತ ಮಂಡಳಿ ಮಂಗಳೂರಿನ ಹೊಸಬೆಟ್ಟು ಶಾಲೆ, ಬಂಟ್ವಾಳ ಐಬಿ ಹಾಗೂ ಮನಪಾಡಿಯ ಸರಕಾರಿ ಶಾಲೆ ಹಾಗೂ ಮೂಲ್ಕಿಯ ಕಿನ್ನಿಗೋಳಿ ಸಿಎಂಸಿ ಸಭಾಭವನದಲ್ಲಿ ನಾಲ್ಕು ನಿರಾಶ್ರಿತ ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಈ ಕೇಂದ್ರಗಳಲ್ಲಿ 44 ಮಂದಿ ಆಶ್ರಯ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

    ಕಳೆದ 24 ಗಂಟೆಗಳಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಏಳು ಮನೆಗಳಿಗೆ ತೀವ್ರ ಹಾನಿಯಾಗಿದೆ. ಕಳೆದ 24 ಗಂಟೆಗಳಲ್ಲಿ 201 ವಿದ್ಯುತ್ ಕಂಬಗಳು ಮತ್ತು 6 ಟ್ರಾನ್ಸ್‌ಫಾರ್ಮರ್‌ಗಳು ಧರೆಗುರುಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

   ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದು ಹಾಗೂ ರೆಡ್ ಅಲರ್ಟ್ ಘೋಷಣಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪದವಿ ಕಾಲೇಜುಗಳು ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದೆ.

   ಈ ನಡುವೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಹೊನ್ನೇಡಿ ಎಂಬಲ್ಲಿ ಗುರುವಾರ ಸುರಿದ ಭಾರೀ ಮಳೆಗೆ ವ್ಯಕ್ತಿಯೊಬ್ಬರು ಹೊಳೆಗೆ ಕೊಚ್ಚಿ ಹೋಗಿದ್ದಾರೆಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link