ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪರ್ತಕರ್ತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ,
ಪತ್ರಕರ್ತ ಮೃತಪಟ್ಟ ಸಂದರ್ಭದಲ್ಲಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಪಿಂಚಣಿಯನ್ನು 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಷಿಸಿರುವುದು ಸ್ವಾಗತಾರ್ಹ ಎಂದು ಕೆಯುಡಬ್ಲ್ಯೂಜೆ ಪ್ರತಿಕ್ರಿಯಿಸಿದೆ. ಪತ್ರಕರ್ತರ ಮಾಸಾಶನ ತ್ವರಿತ ಗತಿಯಲ್ಲಿ ಅರ್ಹರಾದ ಪತ್ರಕರ್ತರಿಗೆ ಸಿಗುವಂತೆ ಮಾಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿದೆ.
![](https://prajapragathi.com/wp-content/uploads/2023/07/session.jpg)