ಬೆಂಗಳೂರು:
ಈ ಹಿಂದೆಯೇ ಬೆಳಗಾವಿಯಲ್ಲಿ ಯೋಜನೆ ಚಾಲನೆಗೆ ಸಿದ್ಧತೆ ನಡೆಸುವಂತೆ ತಿಳಿಸಲಾಗಿತ್ತು. ಇದರಂತೆ ಸಿದ್ಧತೆಗಳನ್ನು ಆರಂಭಿಸಲಾಗಿತ್ತು, ಆದರೆ ಈಗ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಾರ್ಯಕ್ರಮದ ವೇಳಾಪಟ್ಟಿ ಮತ್ತು ಸ್ಥಳವನ್ನು ಪ್ರಕಟಿಸಿದ್ದರು. ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಹೈಕಮಾಂಡ್ ಕಾರಣ ನೀಡಬೇಕು ಎಂದು ತಿಳಿಸಿದರು.
‘ಗೃಹಲಕ್ಷ್ಮಿ ಯೋಜನೆ ಸ್ಥಳಾಂತರಕ್ಕೆ ನಾನು ಕಾರಣ ಕೊಡಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕ್ರಮ ನಿಗದಿಪಡಿಸಿದ್ದಾರೆ. ಅಲ್ಲಿಂದ ಅವರಿಗೆ ಆಗಮಿಸಲು ಅನುಕೂಲವಾಗಲೆಂದು ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ನಮಗೆ ತಿಳಿಸಲಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಚ್ಚಿನ ಪ್ರತಿಕ್ರಿಯೆ ನೀಡಬಹುದು’ ಎಂದರು.
‘ಬಿಜೆಪಿ ಮತ್ತು ಜೆಡಿಎಸ್ನ ಹಲವು ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ರಾಜ್ಯಮಟ್ಟದ ನಾಯಕರೊಂದಿಗೆ ಮಾತುಕತೆ ನಡೆಯುತ್ತಿರುವುದರಿಂದ, ಯಾರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾಹಿತಿ ನನಗಿಲ್ಲ. ಜಿಲ್ಲೆಯ ಯಾವೊಬ್ಬ ಬಿಜೆಪಿ ನಾಯಕರು ಸದ್ಯ ಕಾಂಗ್ರೆಸ್ಗೆ ಬರುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.
![](https://prajapragathi.com/wp-content/uploads/2023/08/gruha-lakshmi-1.jpg)