ಅಲಹಾಬಾದ್:
‘ನಕಲಿ ಪದವಿ’ ಪ್ರಕರಣದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ಪ್ರಸ್ತುತ ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಸಲ್ಲಿಸಲಾಗಿದ್ದ ಕ್ರಿಮಿನಲ್ ಪರಿಷ್ಕರಣೆ ಅರ್ಜಿ ಕುರಿತು ನೊಟೀಸ್ ಜಾರಿ ಮಾಡಿರುವ ನ್ಯಾಯಮೂರ್ತಿ ರಾಜ್ಬೀರ್ ಸಿಂಗ್ ಅವರು, ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದಾರೆ. ಪ್ರಯಾಗ್ರಾಜ್ ನಿವಾಸಿ ದಿವಾಕರ್ ನಾಥ್ ತ್ರಿಪಾಠಿ ಎಂಬುವವರ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ಹೊರಡಿಸಲಾಗಿದೆ.
ನಕಲಿ ದಾಖಲೆಗಳ ಲಾಭ ಪಡೆದಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಅವರು ನಾಲ್ಕು ವಾರಗಳಲ್ಲಿ ನೋಟಿಸ್ಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆ ಡಿಸೆಂಬರ್ 21 ರಂದು ನಡೆಯಲಿದೆ.
![](https://prajapragathi.com/wp-content/uploads/2023/11/keshav-prasad.gif)