ಬೆಂಗಳೂರು :
ಅಶ್ಲೀಲ ವಿಡಿಯೋ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿದ್ದು, ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ತನಿಖೆ ನಡೆಸಲು ಎಸ್ಐಟಿ ಸಜ್ಜಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
“ಸಂಸದ ಪ್ರಜ್ವಲ್ ರೇವಣ್ಣ ವಿಶೇಶಕ್ಕೆ ಹೋಗುವ ಮೊದಲು ರೆಡ್ ಕಾರ್ನರ್ ನೋಟೀಸ್ ಹೊರಡಿಸಬಹುದಿತ್ತು. ಏರ್ಪೋರ್ಟ್ಗಳನ್ನು ಮ್ಯಾನೇಜ್ ಮಡ್ತಿರೋದ್ಯಾರು? ಪ್ರಶ್ನಿದರಲ್ಲದೆ, ಯಾಕೆ ಕೇಂದ್ರ ಬಿಜೆಪಿ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಬಿಜೆಪಿ ನಾಯಕರು ಯಾಕೆ ಉತ್ತರ ನೀಡುತ್ತಿಲ್ಲ,” ಎಂದು ವಾಗ್ದಾಳಿ ನಡೆಸಿದರು.
ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದ್ದು, ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿದೆ. ದೂರು ಕೂಡ ದಾಖಲಾಗಿದ್ದು, ಎಸ್ಐಟಿ ತನಿಖೆ ನಡೆದ ಬಳಿಕ ಈ ಬಗ್ಗೆ ಮಾತನಾಡೋಣ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
