ಹೊಸನಗರ:
ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್ನಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಪಟ್ಟಣ ಠಾಣೆ ಪಿಎಸ್ಐ ರಮೇಶ್ ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾರಾಂತ್ಯ ಪ್ರವಾಸಕ್ಕೆ ಬಂದಿದ್ದ 12 ಯುವಕರ ಗುಂಪಿನಲ್ಲಿ ವಿನೋದ್ ಇದ್ದರು. ಯಡೂರು ಅಬ್ಬಿ ಜಲಪಾತಕ್ಕೆ ಬರುವ ಮುನ್ನ ಕೊಡಚಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಕಳೆದ ವರ್ಷ ಮತ್ತೊಬ್ಬ ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ ಅಬ್ಬಿ ಜಲಪಾತದ ಮಾರ್ಗವನ್ನು ಕಂದಕ ತೋಡಿ ನಿರ್ಬಂಧಿಸಲಾಗಿತ್ತು. ಆದರೆ, ಯುವಕರು ವಾಹನ ನಿಲ್ಲಿಸಿ ಒಂದೂವರೆ ಕಿ.ಮೀ ನಡೆದು ಜಲಪಾತ ತಲುಪಿದ್ದರು.