ಪಾಲ್ಘರ್:
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ಸಾವಿಗೆ ಕಾರಣರಾದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.ಗುರುವಾರ ಸಂಜೆ 6.30ರ ಸುಮಾರಿಗೆ ಅರ್ನಾಳ ಸಗ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕಿ ಆತ್ಮಜ ಕಸತ್(45) ಅವರು ದಿನದ ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ್ಮಜ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕೆಲವು ಗಂಟೆಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅಪಘಾತದ ಸಮಯದಲ್ಲಿ ಕಾರು ಚಾಲಕ ಶುಭಂ ಪ್ರತಾಪ್ ಪಾಟೀಲ್ ಪಾನಮತ್ತನಾಗಿದ್ದ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿರುವುದಾಗಿ ಹಿರಿಯ ಇನ್ಸ್ಪೆಕ್ಟರ್ ವಿಜಯ್ ಪಾಟೀಲ್ ಹೇಳಿದ್ದಾರೆ.ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
