ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಉದ್ದೇಶ ನಮಗಿಲ್ಲ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ

   ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಅಥವಾ ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿ ಯಲ್ಲಿ ಇಂದು  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮತದಾರರು ಕಾಂಗ್ರೆಸ್ ಪಕ್ಷಕ್ಕೆ 5 ವರ್ಷ ಜನಾದೇಶ ಕೊಟ್ಟಿದ್ದಾರೆ. ಹಾಗಾಗಿ ನಾವು ಬೀಳಿಸುವ ಪ್ರಶ್ನೆಯೇ ಉದ್ಭವಿಸದು ಎಂದು ಪ್ರತಿಕ್ರಿಯಿಸಿದರು.

   ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ನಾವು ಅಧಿಕಾರಕ್ಕೆ ಬರುವ ಆಲೋಚನೆ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಸಂಪೂರ್ಣ ಆಡಳಿತ ನಡೆಸಲಿ ಎಂಬುದೇ ಬಿಜೆಪಿಯ ನಿಲುವು ಮತ್ತು ಆಶಯವಾಗಿದೆ. ಕಳೆದ ಬಾರಿ ಬಿಜೆಪಿ 104 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ 68ಕ್ಕೆ ಇಳಿದಿತ್ತು. ಜನ ಅವರನ್ನು ತಿರಸ್ಕಾರ ಮಾಡಿದ್ದರು. ಆದಾಗ್ಯೂ ಕಾಂಗ್ರೆಸ್ – ಜೆಡಿಎಸ್ ಸೇರಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಯತ್ನಿಸಿದ್ದರು. 

    ಬಳಿಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಯತ್ನಿಸಿದರು. ಹಾಗಾಗಿ ಆಗಿನ ಸಂದರ್ಭದಲ್ಲಿ ಬಿಜೆಪಿ ಸಹ ಸರ್ಕಾರ ರಚಿಸಲು ಪ್ರಯತ್ನಿಸಿತ್ತು. ಆದರೆ, ಈ ಬಾರಿ ಬಿಜೆಪಿ ಅಂಥ ಯಾವುದೇ ಪ್ರಯತ್ನ ನಡೆಸುವುದಿಲ್ಲ ಎಂದರು. ಇನ್ನು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅವರು ಶುದ್ಧರು ಎಂದಾದರೆ. ಬೇಕಿದ್ದರೆ ಅವರೇ ಸಿಎಂ ಆಗಿ ಮುಂದುವರಿಯಲಿ. ನಮ್ಮ ಅಭ್ಯಂತರ ಏನಿಲ್ಲ ಎಂದು ಪ್ರಲ್ಹಾದ್​ ಜೋಶಿ ಹೇಳಿದರು.

Recent Articles

spot_img

Related Stories

Share via
Copy link