ಘಟನೆಯ ಬೆನ್ನಲ್ಲೇ ಕಾರಾಗೃಹಗಳ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಧ್ಯರಾತ್ರಿ 1 ಗಂಟೆಯವರೆಗೆ ವಿಚಾರಣೆ ನಡೆಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ನಂತರ, ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಏಳು ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ವರದಿ ಬಂದ ತಕ್ಷಣ ಜೈಲು ಅಧೀಕ್ಷಕರನ್ನು ವರ್ಗಾವಣೆ ಮಾಡಲಾಗುವುದು ಎಂದರು.
ಹಿರಿಯ ಅಧಿಕಾರಿಗಳ ಶಾಮೀಲು ಕಂಡುಬಂದಲ್ಲಿ ಯಾವುದೇ ಹಿಂಜರಿಕೆ ಮತ್ತು ಕರುಣೆ ಇಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜೈಲರ್ ಗಳಾದ ಶರಣ ಬಸವ ಅಮೀನಗಡ, ಪ್ರಭು ಎಸ್.ಖಂಡೇಲವಾಲ್, ಸಹಾಯಕ ಜೈಲರ್ ಎಲ್.ಎಸ್. ತಿಪ್ಪೆ ಸ್ವಾಮಿ ಮತ್ತು ಶ್ರೀಕಾಂತ ತಳವಾರ, ಹೆಡ್ ವಾರ್ಡನ್ ವೆಂಕಟಪ್ಪ ಮೂರ್ತಿ, ವಾರ್ಡನ್ ಬಸಪ್ಪ ತೇಲಿ ಮತ್ತು ಹೆಡ್ ವಾರ್ಡನ್ ವೆಂಕಟಪ್ಪ ಕಟ್ಟೋಳಿ ಮತ್ತು ಸಂಪತ್ ಕುಮಾರ್ ಕಡಪಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
