6 ತಿಂಗಳಲ್ಲಿ 14 ಲೇನ್‌ ಬೆಂಗ್ಳೂರು-ಮುಂಬೈ ರಸ್ತೆ ಕೆಲಸ ಶುರು :ನಿತಿನ್ ಗಡ್ಕರಿ

ಪುಣೆ

   ಹಾಲಿ ಇರುವ ಮುಂಬೈ – ಬೆಂಗಳೂರು ಹೆದ್ದಾರಿ ಈಗಾಗಲೇ ದಟ್ಟಣೆಯಿಂದ ಕೂಡಿದೆ.ಹೀಗಾಗಿ ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ ಪ್ರೆಸ್ ವೇ ನಿರ್ಮಿಸಲಾಗುವುದು. ಟೆಂಡ‌ರ್ ಪ್ರಕ್ರಿಯೆ ಆರಂಭಿಸಲಾಗಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭ ಆಗುವ ನಿರೀಕ್ಷೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

   ಇಲ್ಲಿನ ಕಾಠ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮುಂಬೈನ ಅಟಲ್ ಸೇತುವೆಯಿಂದ ಈ ಹೊಸ ರಸ್ತೆ ಶುರುವಾಗಲಿದ್ದು, ಪುಣೆ ರಿಂಗ್ ರಸ್ತೆ ಮೂಲಕ ಸಾಗುತ್ತದೆ. ಜತೆಗೆ ಛತ್ರಪತಿ ಸಂಭಾಜಿನಗರವನ್ನು ಹಾದು ಹೋಗುತ್ತದೆ. ಇದು ಹಾಲಿ ರಸ್ತೆಗೆ ಬದಲಿಯಾಗಲಿದೆ. ಈ ರಸ್ತೆ ನಿರ್ಮಾಣದಿಂದ ಹಾಲಿ ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನ ಶೇ.50 ರಷ್ಟು ವಾಹನಗಳು ಹೊಸ ಹೆದ್ದಾರಿಗೆ ವರ್ಗಾವಣೆಯಾಗಲಿವೆ’ ಎಂದರು. ‘ಇದರ ಟೆಂಡರ್‌ ಆಹ್ವಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಮುಂದಿನ 6 ತಿಂಗಳಿನಲ್ಲಿ ಕೆಲಸ ಶುರುವಾಗಲಿದೆ’ ಎಂದು ಸಚಿವರು ಹೇಳಿದರು.

  ಸದ್ಯ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು ಸರಿಪಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಲಾಸ್ ಪಿ. ಬ್ರಹ್ಮಂಕರ್ ತಿಳಿಸಿದ್ದಾರೆ. ಬೆಂಗಳೂರು-ಪುಣೆ ನಡುವೆ ಹೊಸದಾಗಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕೆಲಸ ಮಾಡುತ್ತಿದೆ. ಈ ಹೆದ್ದಾರಿ ನಿರ್ಮಾಣಕ್ಕೆ ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು, ಯಾವ ಮಾರ್ಗದಲ್ಲಿ ಹೆದ್ದಾರಿ ಸಾಗಬೇಕು ಎಂಬುದನ್ನು ಆನಂತರನಿರ್ಧರಿಸಲಾಗುವುದು.

    ಅದನ್ನು ಹೊರತುಪಡಿಸಿ ಬೆಂಗಳೂರು-ಮುಂಬೈ ನಡುವೆ 14 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಯಾವುದೇ ಪ್ರಸ್ತಾವನೆನಮ್ಮಮುಂದಿಲ್ಲ. ಆದರೆ, ಹೆದ್ದಾರಿಸಾಗುವಮಾರ್ಗದಲ್ಲಿನ ಸಮಸ್ಯೆಗಳ ನಿವಾರಣಾ ಕಾರ್ಯ ನಡೆಸಲಾಗುತ್ತಿದೆಯಷ್ಟೇ ಎಂದು ಮಾಹಿತಿ ನೀಡಿದರು. ಪ್ರಸ್ತುತ ಬೆಂಗಳೂರಿನಿಂದ ಮುಂಬೈಗೆ ಸಂಪರ್ಕಿಸಲು 2 ಮಾರ್ಗಗಳಿವೆ. ಒಂದು ಬೆಂಗಳೂರು-ಹುಬ್ಬಳ್ಳಿ- ಬೆಳಗಾವಿ-ಪುಣೆ-ಮುಂಬೈ ಮಾರ್ಗ, ಇದು 986 ಕಿ.ಮೀ. ಉದ್ದದ ಎನ್ ಎಚ್ 48. ಇನ್ನೊಂದು ಮಾರ್ಗ ಬೆಂಗಳೂರು-ತುಮಕೂರು-ಚಿತ್ರದುರ್ಗ-ವಿಜಯನಗರ-ಬಾಗಲಕೋಟೆ ಮೂಲಕ ಹಾಯ್ದು ಮಹಾರಾಷ್ಟ್ರ ಸೇರುತ್ತದೆ. ಇದು 900 ಕಿ.ಮೀ.ಇದೆ.

Recent Articles

spot_img

Related Stories

Share via
Copy link
Powered by Social Snap