ಅಪಾರ ಜನರ ಮನ್ನಣೆ ಹಾಗೂ ಸ್ಥಳ ಮಹಾತ್ಮೆ ಹೊಂದಿರುವ ತಿರುಪತಿ ಬಳಿಯ ತಿರುಮಲ ಬೆಟ್ಟದಲ್ಲಿ ನೆಲೆಗೊಂಡಿರುವ ವೆಂಕಟರಮಣ ಸ್ವಾಮಿಯ ವಿಗ್ರಹ ಸಂಪೂರ್ಣವಾಗಿ ಸ್ವಯಂ ಉದ್ಭವಮೂರ್ತಿ. ಇದನ್ನು ಯಾರೂ ಸ್ಥಾಪನೆ ಮಾಡಿಲ್ಲ. ಈ ಹಿಂದೆ ತಿರುಪತಿ ತಿಮ್ಮಪ್ಪ ಹುತ್ತದಲ್ಲಿರುವಾಗ, ಸಾಕ್ಷಾತ್ ಈಶ್ವರನೇ ಹಸುವಿನ ರೂಪದಲ್ಲಿ ಬಂದು ಹಾಲುಣಿಸುತ್ತಿರುತ್ತಾನೆ.
ರಾಜಾ ಚೋಳನ ಅರಮನೆ ಹಸುಗಳನ್ನ ನೋಡಿಕೊಳ್ಳುತ್ತಿದ್ದ ದನಗಾಹಿಗೆ ಈ ಕಾಮಧೇನು ಹೆಸರಿನ ಹಸು ಹಾಲು ಕೊಡದೇ ಇದ್ದುದು ಅನುಮಾನಕ್ಕೆ ಕಾರಣವಾಗುತ್ತದೆ. ಒಂದು ದಿನ, ಆ ಹಸುವನ್ನು ಮರೆಯಿಂದ ಹಿಂಬಾಲಿಸಿಕೊಂಡು ಹೋಗುತ್ತಾನೆ. ಆಗ ಕಾಮಧೇನು, ಹುತ್ತದಲ್ಲಿದ್ದ ಶ್ರೀನಿವಾಸನಿಗೆ ಹಾಲು ಎರೆಯುತ್ತಿರುತ್ತಾಳೆ. ಕೋಪಗೊಂಡ ದನಗಾಹಿ, ತನ್ನ ಕೊಡಲಿಯಿಂದ ಹಸುವನ್ನ ಹೊಡೆಯೋಕೆ ಮುಂದಾಗ್ತಾನೆ.
ಶ್ರೀನಿವಾಸನ ಪರಮ ಭಕ್ತೆ ನೀಲಾದೇವಿ, ತನ್ನ ಕೂದಲನ್ನೇ ಕತ್ತರಿಸಿ, ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಆಗ ಶ್ರೀನಿವಾಸ, ನೀಲಾದೇವಿಗೆ ಒಂದು ವರ ನೀಡುತ್ತಾನೆ. ಕಲಿಯುಗದಲ್ಲಿ ಭಕ್ತರು, ನನ್ನ ಕ್ಷೇತ್ರಕ್ಕೆ ಬಂದು ಮುಡಿ ಸಮರ್ಪಣೆ ಮಾಡಲಿ. ಅವರು ಕೊಡುವ ತಲೆ ಕೂದಲಿನ ಮುಡಿ, ನಿನ್ನ ಮೂಲಕವೇ ನನಗೆ ಅರ್ಪಣೆಯಾಗಲಿ ಎಂದು.
ಬಲಗಡೆ ಶ್ರೀ ವೆಂಕಟೇಶ್ವರ ಸ್ವಾಮಿಯ ತಲೆಯ ಮೇಲೆ ಹೊಡೆದ ಗಾಯ ಈಗಲೂ ಇದೆ! ಆ ಕಾರಣದಿಂದನೇ ಸ್ವಾಮಿ ತಲೆಗೆ ಗಂಧವನ್ನು ಹಚ್ಚುವ ಸಂಪ್ರದಾಯ ಕೂಡಾ ನಡೆದು ಬಂದಿದೆ! ಇಂತಹ ಅನೇಕ ಅಚ್ಚರಿ ಸಂಗತಿಗಳು ಈ ದೇವಾಲಯದಲ್ಲಿ ಅಡಗಿದೆ… ಭಗವಂತ ನೆಲೆಸಿರುವ ವೈಕುಂಠ ನಿವಾಸವೇ ಒಂದು ದೊಡ್ಡ ಅಚ್ಚರಿ. ಇನ್ನೂ ಎಷ್ಟೊಂದು ಅಚ್ಚರಿಗಳು ಆ ಬೆಟ್ಟಗಳಲ್ಲಿ ಅಡಗಿದೆಯೋ ಆ ತಿಮ್ಮಪ್ಪನೇ ಬಲ್ಲ!








