ಮಳೆಯಿಂದಾಗಿ ಮೊದಲ ದಿನದಾಟ ರದ್ದು

ಬೆಂಗಳೂರು :

    ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ಇಂದಿನಿಂದ ಅಂದರೆ ಬುಧವಾರ, ಅಕ್ಟೋಬರ್ 16 ರಿಂದ ಆರಂಭವಾಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಪಂದ್ಯದ ಮೊದಲ ದಿನದಾಟವನ್ನು ರದ್ದುಗೊಳಿಸಲಾಗಿದೆ. ನಿಗದಿಯಂತೆ ಇಂದು ಮುಂಜಾನೆ 9 ಗಂಟೆಗೆ ಉಭಯ ತಂಡಗಳ ನಡುವೆ ಟಾಸ್ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಟಾಸ್ ಸಹ ನಡೆಯಲು ಸಾಧ್ಯವಾಗಲಿಲ್ಲ.

   ನಿನ್ನೆಗ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆಯಾದರೂ, ತುಂತುರು ಮಳೆ ಬೀಳುತ್ತಲೇ ಇದೆ. ಮಳೆ ಕೊಂಚ ಕಡಿಮೆಯಾದಾಗಲೆಲ್ಲ ಅಂಪೈರ್​ಗಳು ಮೈದಾನವನ್ನು ಪರಿಶೀಲಿಸಿದರು. ಆದರೆ ಪಂದ್ಯಕ್ಕೆ ಮೈದಾನ ಸಜ್ಜಾಗಿಲ್ಲದ್ದನ್ನು ಮನಗಂಡ ಅಂಪೈರ್ಸ್​ ಕಾದು ನೋಡುವ ತಂತ್ರಕ್ಕೆ ಮುಂದಾದರು. ಹೀಗಾಗಿ ಮೊದಲ ದಿನದಾಟದ ಮೊದಲೆರಡು ಸೆಷನ್​ಗಳವರೆಗೂ ಪಂದ್ಯವನ್ನು ನಡೆಸಲು ಕಾಯಲಾಯಿತು. ಆದರೆ ಆ ಬಳಿಕವೂ ಮಳೆ ನಿಲ್ಲದನ್ನು ಗಮನಿಸಿದ ಅಂಪೈರ್ಸ್​, ದಿನದಾಟವನ್ನು ರದ್ದುಗೊಳಿಸಲು ಮುಂದಾದರು.

    ಹವಾಮಾನ ವರದಿಯ ಪ್ರಕಾರ, ಭಾರತ- ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ ಎಂಬುದು ಖಚಿತವಾಗಿತ್ತು. ಅದರಂತೆ ಮಳೆಯಿಂದಾಗಿ ಮೊದಲ ದಿನದಾಟ ಟಾಸ್ ಕೂಡ ನಡೆಯದೆ ರದ್ದಾಗಿದೆ. ಹೀಗಾಗಿ ನಾಳೆಯಾದರೂ ಪಂದ್ಯ ಆರಂಭವಾಗುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ. ಆದರೆ ಹವಾಮಾನ ವರದಿಯ ಪ್ರಕಾರ, ಅಕ್ಟೋಬರ್ 20ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ.  ಪಂದ್ಯದ ಎರಡನೇ ದಿನದಂದು ಶೇ. 41 ರಷ್ಟು ಮಳೆಯಾಗುವ ಸಾಧ್ಯತೆ ಇದ್ದರೆ, ಮೂರನೇ ದಿನದಂದು ಮಳೆ ಇನ್ನಷ್ಟು ಹೆಚ್ಚಲಿದೆ. ಅದರಂತೆ ಶೇ. 67 ರಷ್ಟು ಮಳೆಯಾಗಲಿದೆ.

Recent Articles

spot_img

Related Stories

Share via
Copy link