ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು

  ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್ ಎಂಬ ವರದಿ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ಕೇವಲ ಶೇ 40 ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75 ರಷ್ಟು ವೈದ್ಯಕೀಯ ಸರಬರಾಜು ನಿಗಮದಿಂದಲೇ ಔಷಧ ಪೂರೈಕೆಯಾಗುತ್ತಿದೆ ಎಂದರು.

  ತಾಂತ್ರಿಕ ಕಾರಣದಿಂದ ಟೆಂಡರ್​ ವಿಳಂಬವಾಗಿದೆ ಎಂದ ಅವರು, ಈ ವರ್ಷವೂ ಇಂಡೆಂಟ್​ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸದ್ಯ, ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಔಷಧ ಇದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂಥವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ, ಔಷಧ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

  ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ಅಗತ್ಯ ಔಷಧಗಳು ಇಲ್ಲದಿರುವುದು ಲಭ್ಯ ದಾಖಲೆಗಳಿಂದ ತಿಳಿದುಬಂದಿತ್ತು. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಔಷಧ ಸಂಗ್ರಹ ದಾಖಲೆಗಳಿಂದ ತಿಳಿದುಬಂದಿತ್ತು. ವಿಶೇಷವೆಂದರೆ, ಇದೀಗ ಆರೋಗ್ಯ ಸಚಿವರು ಔಷಧ ಕೊರತೆಯನ್ನು ನಿರಾಕರಿಸಿದ್ದಾರೆ.

Recent Articles

spot_img

Related Stories

Share via
Copy link