ದರ್ಶನ್​ಗೆ ಮತ್ತೆ ಸಂಕಷ್ಟ….!

ಚಿತ್ರದುರ್ಗ

     ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ, ಪೊಲೀಸರು ಈಗ ಸುಮ್ಮನೆ ಕುಳಿತಿಲ್ಲ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕವೂ ಅವರು ತನಿಖೆ ಮುಂದುವರಿಸಿದ್ದಾರೆ. ನಾನಾ ಹಂತದಲ್ಲಿ ತನಿಖೆ ನಡೆಸುವ ಕೆಲಸ ಆಗುತ್ತಿದೆ. ಹದಿನೇಳು ಆರೋಪಿಗಳ ಹಣಕಾಸಿನ ಮೂಲಕ್ಕೆ ತನಿಖಾಧಿಕಾರಿಗಳು ಕೈ ಹಾಕಿದ್ದಾರೆ. ಇದರಿಂದ ಮತ್ತಷ್ಟು ವಿಚಾರಗಳು ಹೊರಕ್ಕೆ ಬರುತ್ತವೆಯೇ ಎನ್ನುವ ಪ್ರಶ್ನೆ ಮೂಡಿದೆ.

   ಐಡಿಎಫ್​ಸಿ ಫಸ್ಟ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್​​ಡಿಎಫ್​ಸಿ ಬ್ಯಾಂಕ್, ಕೋಟಕ್ ಮಹೇಂದ್ರ ಬ್ಯಾಂಕ್, ಕೆನರಾ ಬ್ಯಾಂಕ್, ಎಸ್​ಬಿಐ ಬ್ಯಾಂಕ್, ಐಸಿಐಸಿಐ ಬ್ಯಾಂಕ್​ಗಳ ಮ್ಯಾನೇಜರ್​ನ ಸಂಪರ್ಕಿಸಿ ಪೊಲೀಸರು ಮಾಹಿತಿ ಸಂಗ್ರಹ ಮಾಡಿದ್ದಾರೆ.
 
   ಕೊಲೆಯ ಹಿಂದೆ ಅಥವಾ ನಂತರದ ದಿನಗಳಲ್ಲಿ ದೊಡ್ಡ ಮೊತ್ತದ ಹಣದ ವ್ಯವಹಾರ ನಡೆದಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯಲಿದೆ. ಒಂದೊಮ್ಮೆ ಇದು ನಡೆದಿದ್ದರೆ ದರ್ಶನ್​ಗೆ ಸಂಕಷ್ಟ ಉಂಟಾಗಲಿದೆ. ದರ್ಶನ್ ಅವರು ಕೊಲೆ ಮುಚ್ಚಿ ಹಾಕಲು ದೊಡ್ಡ ಮೊತ್ತದ ಹಣ ನೀಡಿದ್ದಾರೆ ಎನ್ನುವ ಆರೋಪ ಇದೆ. ಒಂದಷ್ಟು ಹಣದ ವ್ಯವಹಾರ ಕ್ಯಾಶ್ ಮೂಲಕ ಆಗಿದೆ. ಒನ್ನೊಂದಷ್ಟು ಹಣದ ವ್ಯವಹಾರ ಆನ್​ಲೈನ್ ಮೂಲಕ ಆಗಿರೋ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ. ಆರೋಪಿಗಳ ಮೊಬೈಲ್ ನಂಬರ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರೋ ಬ್ಯಾಂಕ್ ಖಾತೆಯ ವಿವರ ನೀಡುವಂತೆ ಪೊಲೀಸರು ಈ ಮೊದಲು ಬ್ಯಾಂಕ್​ನವರಿಗೆ ಮನವಿ ಮಾಡಿದ್ದರು. ಅದರಂತೆ ಎಲ್ಲಾ ಮಾಹಿತಿಗಳನ್ನ ಖಾಕಿ ಸಂಗ್ರಹಿಸಿದೆ.

Recent Articles

spot_img

Related Stories

Share via
Copy link