ಬೆಂಗಳೂರು
ಒಂಬತ್ತು ತಿಂಗಳುಗಳಿಂದ ಹೈನುಗಾರರಿಗೆ ಕರ್ನಾಟ ಸರ್ಕಾರ ಪ್ರೋತ್ಸಾಹಧನ ನೀಡಿಲ್ಲ. ಇದಕ್ಕೆ ‘ಹಣವಿಲ್ಲ’ ಎಂಬ ಕಾರಣ ನೀಡಲಾಗಿದೆ ಎಂದು ವರದಿಯಾಗಿದೆ. ಕ್ಷೀರಧಾರೆ ಯೋಜನೆಯಡಿ ರೈತರು ಪೂರೈಸುವ ಪ್ರತಿ ಲೀಟರ್ ಹಾಲಿಗೆ ಸರ್ಕಾರ 5 ರೂ. ಪ್ರೋತ್ಸಾಹಧನ ನೀಡಬೇಕಿದೆ.
2024ರ ಜೂನ್ನಿಂದ 2024ರ ಅಕ್ಟೋಬರ್ವರೆಗೆ ಪ್ರೋತ್ಸಾಹ ಧನ ಪಾವತಿ ಮಾಡಿಲ್ಲ. ರೈತರಿಗೆ ಪಾವತಿಸಬೇಕಾದ ಮೊತ್ತ 606.69 ಕೋಟಿ ರೂ. ಬಾಕಿ ಇದೆ ಎಂದು ವೆಂಕಟೇಶ್ ಅವರು ವಿಧಾನಸಭೆಗೆ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಸಮುದಾಯದ ಹೈನುಗಾರರಿಗೆ ಅಕ್ಟೋಬರ್ ತಿಂಗಳಿಗೆ 6.85 ಕೋಟಿ ರೂ. ಪಾವತಿಸಬೇಕಿದ್ದರೆ, ಎಸ್ಟಿ ರೈತರಿಗೆ 2024ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿಗೆ ಇನ್ನೂ 9 ಕೋಟಿ ರೂ. ಪಾವತಿಯಾಗಬೇಕಿದೆ. ಬಾಕಿ ಹಣವನ್ನು ಕಂತುಗಳಲ್ಲಿ ಪಾವತಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ರೈತರಿಗೆ ಪ್ರೋತ್ಸಾಹಧನ ನೀಡದಿರುವುದರಿಂದ ಸದ್ಯ ಪ್ರತಿ ಲೀಟರ್ ಹಾಲಿಗೆ ಒಂದು ರೂಪಾಯಿ ಕಡಿಮೆ ನೀಡಲಾಗುತ್ತದೆ. ರಾಜ್ಯದಲ್ಲಿ ಸುಮಾರು 38 ಲಕ್ಷ ಹೈನುಗಾರರಿದ್ದು, ಅವರಲ್ಲಿ ಶೇ 90ಕ್ಕೂ ಹೆಚ್ಚು ಮಹಿಳೆಯರು ಇದ್ದಾರೆ. ರಾಜ್ಯ ಸರ್ಕಾರ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ, ಆದರೆ ಅವರಿಗೆ ಪ್ರೋತ್ಸಾಹಧನ ನೀಡುವಲ್ಲಿ ಮೌನವಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಟೀಕಿಸಿರುವುದಾಗಿ ವರದಿ ಉಲ್ಲೇಖಿಸಿದೆ.
