ರಂಜಾನ್​ : ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ನೀಡಲು ಸಿಎಂಗೆ ಪತ್ರ…!

ಬೆಂಗಳೂರು

   ರಂಜಾನ್   ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ   ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ   ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್​ ಅಹ್ಮದ್ ಮತ್ತು ನಜೀರ್​ ಅಹ್ಮದ್​ ಪತ್ರ ಬರೆದಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ರಂಜಾನ್​ ಉಪವಾಸ ತೊರೆಯಲು ಅನುಕೂಲವಾಗುವಂತೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಅಲ್ಲಿನ ಸರ್ಕಾರಗಳು ವಿನಾಯಿತಿ ನೀಡುತ್ತಿವೆ. ಅದೇರೀತಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. 

   “ರಂಜಾನ್​ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್​ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡಲಾಗಿದೆ.” 

   “ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ

Recent Articles

spot_img

Related Stories

Share via
Copy link