ರನ್ಯಾ ರಾವ್‌ ಪ್ರಕರಣ : ಈ ಘಟನೆಯಿಂದ ಪೋಷಕನಾಗಿ ನನ್ನ ಹೃದಯ ಒಡೆದು ಹೋಗಿದೆ : ರಾಮಚಂದ್ರ ರಾವ್

ಬೆಂಗಳೂರು :

    ನಟಿ ರನ್ಯಾ ರಾವ್ ಪ್ರಕರಣ ಸಂಚಲನ ಸೃಷ್ಟಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ತರುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಸಿಕ್ಕಿಬಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ರನ್ಯಾ ರಾವ್ ಅವರ ಮಲತಂದೆ ರಾಮಚಂದ್ರ ರಾವ್ ಅವರು ಡಿಜಿಪಿ. ಈ ಪ್ರಕರಣಕ್ಕೂ ಅವರಿಗೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ರಾಮಚಂದ್ರ ರಾವ್   ಅಲ್ಲಗಳೆದಿದ್ದಾರೆ.

   ‘ಈ ಘಟನೆಯಿಂದ ಪೋಷಕನಾಗಿ ನನ್ನ ಹೃದಯ ಒಡೆದು ಹೋಗಿದೆ. ನನಗೆ ಆಗಿರುವ ಅಘಾತವನ್ನು ಹೇಳಲು ಪದಗಳೇ ಇಲ್ಲ. ಇತ್ತಿಚಿನ‌ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಇದು ತುಂಬಾ ಕಷ್ಟದ ಸಮಯ. ಇದನ್ನ ಎದುರಿಸಲು ನಾವು ಕಷ್ಟ ಪಡುತ್ತಿದ್ದೇವೆ. ರನ್ಯಾ ಹಾಗೂ ಜತಿನ್ ಹುಕ್ಕೇರಿ 2024ರಲ್ಲಿ ಮದುವೆ ಆದರು. ಮದುವೆ ಆದ‌ ನಂತರ ಅವರು ತಮ್ಮ ಖಾಸಗಿತನ ಮತ್ತು ಸ್ವಾತ್ರಂತ್ರ್ಯವನ್ನ ಕಾಪಾಡಿಕೊಂಡಿದ್ದಾರೆ. ನಮ್ಮ ಮನೆಗೆ ಬರುವುದನ್ನು ಆಕೆ ನಿಲ್ಲಿಸಿದ್ದಾಳೆ. ನಾವು ಭೇಟಿಯಾಗಲು ಅವಕಾಶ ನೀಡಿಲ್ಲ’ ಎಂದು ಪತ್ರ ಆರಂಭಿಸಿದ್ದಾರೆ.

Recent Articles

spot_img

Related Stories

Share via
Copy link