ಬೇಜವಾಬ್ದಾರಿ ಹೇಳಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ : ಆರ್‌ ಅಶೋಕ್

ಬೆಂಗಳೂರು:

ಸಿದ್ದರಾಮಯ್ಯನವರ ಬೇಜವಾಬ್ದಾರಿ ಹೇಳಿಕೆಯಿಂದ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟುಮಾಡಿತು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯನವರೇ, ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು. ಕೆಟ್ಟ ಮೇಲಾದರೂ ತಮಗೆ ಬುದ್ಧಿ ಬಂತಲ್ಲ ಎನ್ನುವ ಸಮಾಧಾನ ಒಂದು ಕಡೆಯಾದರೆ, ಓಲೈಕೆ ರಾಜಕಾರಣಕಾಗಿ ರಾಷ್ಟ್ರೀಯ ಭದ್ರತೆ ವಿಷಯದಲ್ಲೂ ರಾಜಿ ಮಾಡಿಕೊಳ್ಳಲು ಹೇಸುವುದಿಲ್ಲವಲ್ಲ ಎಂಬ ಆತಂಕ ಮತ್ತೊಂದು ಕಡೆ.

ತಮ್ಮ ಬಾಲಿಶ ಹೇಳಿಕೆ ಶತ್ರುರಾಷ್ಟ್ರದ ಷಡ್ಯಂತ್ರ, ಕುತಂತ್ರಕ್ಕೆ ಆಹಾರವಾಯಿತು, ತಮ್ಮ ಬೇಜವಾಬ್ದಾರಿ ಹೇಳಿಕೆ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟುಮಾಡಿತು ಎಂಬ ವಾಸ್ತವದ ಅರಿವು ತಮಗಾಗಿದೆ ಎಂದು ಭಾವಿಸುತ್ತೇನೆ.ಇನ್ನು ಮುಂದಾದರೂ ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಿ. ತಮ್ಮ ಸ್ಥಾನಕ್ಕೆ ತಕ್ಕಂತಹ ಗಾಂಭೀರ್ಯತೆ, ಸಮಯ ಪ್ರಜ್ಞೆ, ಮುತ್ಸದ್ದಿತನ ರೂಢಿಸಿಕೊಳ್ಳಿ. ಇನ್ನು ಮುಂದಾದರೂ ತಮ್ಮ ಹೇಳಿಕೆಗಳಿಂದ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದಿದ್ದಾರೆ.

Recent Articles

spot_img

Related Stories

Share via
Copy link