ನಾಯಕನಹಟ್ಟಿ :
ನಾಯಕನಹಟ್ಟಿ ಪಟ್ಟಣದ ಪೊಲೀಸ್ ಠಾಣೆಗೆ ನೂತನವಾಗಿ ಪಿ.ಎಸ್.ಐ ಪಾಂಡುರಂಗಪ್ಪ ಅಧಿಕಾರ ಸ್ವೀಕರಿಸಿಕೊಂಡಿರುವುದು ಸಂತಸ ತಂದಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಜಾಗನೂರಹಟ್ಟಿ ಮಂಜುನಾಥ ಹೇಳಿದ್ದಾರೆ.ಪಟ್ಟಣದ ಪೊಲೀಸ್ ಠಾಣೆಗೆ ಆಗಮಿಸಿ ಹೂವಿನ ಹಾರ ಹಾಕುವುದರ ಮೂಲಕ ನಂತರ ಮಾತನಾಡಿದ ಅವರು ನಾಯಕನಹಟ್ಟಿ ಪುಣ್ಯಕ್ಷೇತ್ರದ ಮಾಡಿದಷ್ಟು ನೀಡು ಭಿಕ್ಷೆ ಎಂಬ ವಚನ ನುಡಿದಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ಅವರನ್ನು ಆಶೀರ್ವದಿಸಲಿ ಎಂದು ಶುಭಾ ಆರೈಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಾದ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಬಸಪ್ಪ ನಾಯಕ, ಎತ್ತಿನಹಟ್ಟಿ ಮಾಜಿ ಗ್ರಾ.ಪಂ ಸದಸ್ಯ ಓಬಳೇಶ್ ಉಪಸ್ಥಿತರಿದ್ದರು.
