ಕೇರಳ ಕೊಟ್ಟಿಯೂರ್‌ ಕ್ಷೇತ್ರಕ್ಕೆ ನಟ ದರ್ಶನ್‌  ಭೇಟಿ

ತಿರುವನಂತಪುರಂ:

   ದಕ್ಷಿಣ ಭಾರತದ ಸುಪ್ರಸಿದ್ಧ ದೇವಸ್ಥಾನ ಕೇರಳ ಕೊಟ್ಟಿಯೂರ್‌ ಕ್ಷೇತ್ರಕ್ಕೆ ನಟ ದರ್ಶನ್‌  ಭೇಟಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಸಮೇತ ಕೇರಳದ ಕೊಟ್ಟಿಯೂರ್‌ನಲ್ಲಿರುವ ಶಿವನ ದೇವಸ್ಥಾನಕ್ಕೆ ದರ್ಶನ್‌ ಭೇಟಿ ಕೊಟ್ಟು ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ಧನ್ವೀರ್‌ ಕೂಡ ಸಾಥ್‌ ಕೊಟ್ಟಿದ್ದಾರೆ. ನೀರಿನಲ್ಲಿ ಓಡಾಡಿ ದೇವರ ಮೊರೆ ಹೋಗಿದ್ದಾರೆ.

    ಕೇರಳದ ಕಣ್ಣೂರು ಜಿಲ್ಲೆಯ ಭಾಗವಾಗಿರುವ ಮತ್ತು ತಲಶ್ಶೇರಿಯಿಂದ 60 ಕಿಲೋ ಮೀಟರ್ ದೂರದಲ್ಲಿರುವ ವಾವಲಿ ಅಥವಾ ಬಾವಲಿ ನದಿ ತಟದಲ್ಲಿರುವ ಕೊಟ್ಟಿಯೂರಿನ ಶಿವ ದೇವಾಲಯವು ತನ್ನ ಧಾರ್ಮಿಕ ಮತ್ತು ಐತಿಹಾಸಿಕ ಪ್ರಾಮುಖ್ಯತೆಯಿಂದಾಗಿ ವಿಶ್ವ ವಿಖ್ಯಾತವಾಗಿದ್ದು ದಕ್ಷಿಣ ಕಾಶಿ ಎಂದೂ ಸಹಾ ಪ್ರಸಿದ್ಧವಾಗಿದೆ. ಇದೇ ಸ್ಥಳದಲ್ಲೇ ಪರ ಶಿವನ ಮೊದಲನೇ ಪತ್ನಿ ದಾಕ್ಷಾಯಿಣಿಯ ತಂದೆ ದಕ್ಷನು ಯಾಗವನ್ನು ಮಾಡಿ ಆ ಯಾಗಕ್ಕೆ ಸ್ಮಶಾನವಾಸಿ ಭಸ್ಮಧಾರಿ ಶಿವವನ್ನು ಆಹ್ವಾನಿಸದೇ ಇದ್ದಾಗ ಬೇಸರಗೊಂಡ ದಾಕ್ಷಾಯಿಣಿ ಅದೇ ಯಜ್ಞ ಕುಂಡದಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡ ಸ್ಮರಣೆಗಾಗಿ ಪ್ರತೀ ವರ್ಷ ವೈಶಾಖ ಮಾಸದಲ್ಲಿ ಕೇವಲ 28 ದಿನಗಳ ಕಾಲ ಇಲ್ಲಿರುವ ಒಂದು ದೇವಾಲಯವು ತೆರೆದಿದ್ದು ಅಲ್ಲಿ ನಡೆಯುವ ವೈಶಾಖ ಪೂಜೆಯ ಭಾಗವಾಗಲು ಪ್ರಪಂಚಾದ್ಯಂತ ಇರುವ ಲಕ್ಷಾಂತರ ಭಕ್ತಾದಿಗಳು ಇಲ್ಲಿ ಬರುತ್ತಾರೆ.

Recent Articles

spot_img

Related Stories

Share via
Copy link