ನವದೆಹಲಿ:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಬೆಳಗ್ಗಿನ ಜಾವ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳಲ್ಲಿ ಭೀತಿ ಮನೆ ಮಾಡಿದೆ. ಲಘುವಾಗಿ ಭೂಮಿ ಕಂಪಿಸಿದ್ದರೂ ಆತಂಕಕ್ಕೀಡಾದ ಜನ ತಮ್ಮ ಮನೆಗಳಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವುನೋವು ಅಥವಾ ಹಾನಿ ವರದಿಯಾಗಿಲ್ಲ, ಆದರೆ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ ಗುರುವಾರ ಬೆಳಿಗ್ಗೆ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಬೆಳಿಗ್ಗೆ 9.04 ರ ಸುಮಾರಿಗೆ ಕಂಪನಗಳು ಸಂಭವಿಸಿದ್ದು, ಒಂದು ನಿಮಿಷ ಕಾಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹರಿಯಾಣದ ರೋಹ್ಟಕ್ನಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ. ಅದರ ಪರಿಣಾಮ ದೆಹಲಿಯ ಮೇಲೆ ಬಿದ್ದಿದೆ.
