ವಿಜಯಪುರ:
ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು. ಇದನ್ನು ಮನದಟ್ಟು ಮಾಡಿಕೊಡಲೆಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿಮಾಡಿ, ನಮ್ಮ ಹಕ್ಕನ್ನು ಪ್ರತಿಪಾದಿಸಿದ್ದಾರೆ ಈ ಕುರಿತಂತೆ ನಗರದ ನಿವಾಸದಲ್ಲಿ ಸಚಿವ ಎಂ.ಬಿ.ಪಾಟೀಲ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ. ಬಿ. ಪಾಟೀಲ್ ಇಂದಿನಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದು, ಇಂದು ತಿಕೋಟಾ ತಾಲ್ಲೂಕಿನ ಕೊರಬುಗಲ್ಲಿ ₹ 4.95 ಕೋಟಿ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ, ನಂತರ ₹4.95 ಕೋಟಿ ವೆಚ್ಚದಲ್ಲಿ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆಯವರೆಗೆ 5.2 ಕಿ.ಮೀ ವಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಿದ್ದಾರೆ.
ಬಳಿಕ ಮಾತನಾಡಿರುವ ಅವರು ಏರೋಸ್ಪೇಸ್ ಮತ್ತು ಡಿಫೆನ್ಸ್ ವಲಯದಲ್ಲಿ ರಾಷ್ಟ್ರಕ್ಕೆ ನಮ್ಮ ರಾಜ್ಯದ ಕೊಡುಗೆ ಶೇ. 65 ರಷ್ಟಿದ್ದರೂ ಡಿಫೆನ್ಸ್ ಕಾರಿಡಾರ್ ದೊರೆತಿಲ್ಲ. ನಮಗಿಂತಲೂ ಕಡಿಮೆ ಕೊಡುಗೆ ನೀಡುತ್ತಿರುವ ತಮಿಳುನಾಡು ಮತ್ತು ಉತ್ತರಪ್ರದೇಶಕ್ಕೆ ಡಿಫೆನ್ಸ್ ಕಾರಿಡಾರ್ ನೀಡಲಾಗಿದೆ. ಈ ಲೋಪವನ್ನು ಹಿಂದೆಯೇ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇನೆ. ಡಿಫೆನ್ಸ್ ಕಾರಿಡಾರ್ ನಮ್ಮ ಹಕ್ಕಾಗಿದ್ದು, ,ರಾಜ್ಯಕ್ಕೆ 2 ಡಿಫೆನ್ಸ್ ಕಾರಿಡಾರ್ಗಳ ಬೇಡಿಕೆ ಸಂಬದಿಸಿದಂತೆ ಶೀಘ್ರದಲ್ಲೇ ಪ್ರಧಾನಿಗಳ ಭೇಟಿ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಡಿಫೆನ್ಸ್ ಕಾರಿಡಾರ್ ನಮ್ಮ ಹಕ್ಕಾಗಿದ್ದು, ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು ಏರೋಸ್ಪೇಸ್ ಮತ್ತು ಡಿಫೆನ್ಸ್ ವಲಯದಲ್ಲಿ ರಾಷ್ಟ್ರಕ್ಕೆ ಕರ್ನಾಟಕ ನೀಡುತ್ತಿರುವ ಕೊಡುಗೆ ಶೇ.65ಕ್ಕೂ ಹೆಚ್ಚಿದೆ. ಇಷ್ಟೊಂದು ಮಹತ್ವದ ಕೊಡುಗೆ ನೀಡುತ್ತಿರುವ ರಾಜ್ಯಕ್ಕೆ ಇನ್ನಷ್ಟು ಪ್ರೋತ್ಸಾಹದ ಅಗತ್ಯವಿದೆ. ಉತ್ತರ ಕರ್ನಾಟಕದಲ್ಲಿ ಒಂದು, ದಕ್ಷಿಣ ಕರ್ನಾಟಕದಲ್ಲಿ ಮತ್ತೊಂದು ಡಿಫೆನ್ಸ್ ಕಾರಿಡಾರ್ ಅಗತ್ಯವಿದೆ ಎಂಬ ಬೇಡಿಕೆಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಇನ್ನು ಈ ಪ್ರಸ್ತಾವವನ್ನು ಕೇಂದ್ರ ಸಚಿವ ಸಂಪುಟದಲ್ಲಿ ಚರ್ಚಿಸುವ ಅಗತ್ಯವಿದೆ ಎಂಬುದಾಗಿ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಲ್ಲದೆ, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರನ್ನು ಭೇಟಿಮಾಡಿ ಪ್ರಸ್ತಾಪಿಸಲು ಸಲಹೆ ನೀಡಿದ್ದಾರೆ ಎಂದು ತಿಳಿಸಿದರು, ವೈಮಾಂತರಿಕ್ಷ ವಲಯದಲ್ಲಿ ನಾವು ದೇಶಕ್ಕೇ ಅಗ್ರಸ್ಥಾನದಲ್ಲಿದ್ದೇವೆ. ಹೀಗಾಗಿ ನಮಗೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಒಂದೊಂದು ಡಿಫೆನ್ಸ್ ಕಾರಿಡಾರ್ ಅಗತ್ಯವಾಗಿ ಬೇಕಾಗಿದೆ. ಬೆಳಗಾವಿಯಲ್ಲಿ ಈಗ ಏಕಸ್ ತರಹದ ದೈತ್ಯ ಕಂಪನಿಗಳಿವೆ. ಬೇರೆ ರಾಜ್ಯದವರಿಗೆ ಡಿಫೆನ್ಸ್ ಕಾರಿಡಾರ್ ಕೊಡುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಸಲ್ಲಬೇಕಾದ್ದು ಸಲ್ಲಲೇಬೇಕು ಹಿಂದೆ ಮಾಡಿದ ತಪ್ಪು ಕೇಂದ್ರ ಸರ್ಕಾರಕ್ಕೆ ಅರಿವಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಗಳನ್ನು ಭೇಟಿಮಾಡಿ ರಾಜ್ಯದ ಬೇಡಿಕೆಗಳನ್ನು ಅವರಿಗೆ ಮನವರಿಕೆ ಮಾಡಿಕೊಡಲಿದ್ದೇವೆ ಎಂದರು
