ಕರಾವಳಿ ತಾಲೂಕುಗಳಲ್ಲಿ ಭಾರಿ ಮಳೆ ಹಿನ್ನಲೆ : 5 ತಾಲೂಕು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಜುಲೈ 26 ರಜೆ ಘೋಷಣೆ

ಕಾರವಾರ:

    ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 25-26, 2025ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 30-50 ಕಿ.ಮೀ. ಇರಲಿದೆ ಎಂದು ತಿಳಿಸಲಾಗಿದೆ.

    ಜುಲೈ 25ರ ಬೆಳಿಗ್ಗೆ 8:30ರಿಂದ ಸಂಜೆ 4:30ರವರೆಗೆ ಹೊನ್ನಾವರದ ಹೆರಂಗಡಿಯಲ್ಲಿ 150.5 ಮಿಮೀ ಮಳೆ ದಾಖಲಾಗಿದೆ ಎಂದು KSNDMC ವರದಿ ಮಾಡಿದೆ.ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ

ಧಾರಾಕಾರ ಮಳೆಯ ಸಾಧ್ಯತೆ ಇದೆ.ರಜೆ ಘೋಷಣೆ:

   ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಜುಲೈ 26, 2025ರಂದು ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಅಂಗನವಾಡಿ, ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Recent Articles

spot_img

Related Stories

Share via
Copy link