ಥಿನ್ನರ್‌ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ, ಬಾಲಕ ಸಾವು, ತಂದೆಗೆ ತೀವ್ರ ಗಾಯ

ಧಾರವಾಡ:

    ಧಾರವಾಡದಲ್ಲಿ  ಘೋರವಾದ ದುರಂತವೊಂದು ಸಂಭವಿಸಿದೆ. ಪೇಂಟ್‌ ತೆಳು ಮಾಡಲು ಬಳಸುವ ಥಿನ್ನರ್  ಬಾಟಲಿಯಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಈ ಘಟನೆಯಲ್ಲಿ ನಾಲ್ಕು ವರ್ಷದ ಬಾಲಕ ಸಾವನಪ್ಪಿದ್ದಾನೆ. ಮಗನನ್ನು ರಕ್ಷಿಸಲು ಬಂದ ತಂದೆಗೆ ಗಂಭೀರವಾದ ಗಾಯಗಳಾಗಿವೆ. ಧಾರವಾಡದ ಸಂತೋಷ್ ನಗರದಲ್ಲಿ ನಿನ್ನೆ ಈ ಘಟನೆ ಸಂಭವಿಸಿದೆ.

   ನಾಲ್ಕು ವರ್ಷದ ಬಾಲಕ ಅಗಸ್ತ್ಯ ಸಾವನಪ್ಪಿದ್ದು ಆತನ ತಂದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಲಕನ ಅಜ್ಜಿ ಒಲೆ ಹೊತ್ತಿಸಲು ಥಿನ್ನರ್ ಬಳಸಿದ್ದಾರೆ. ಈ ವೇಳೆ ದಿಡೀರನೆ ಬೆಂಕಿ ಹೊತ್ತಿಕೊಂಡು ಬೆಂಕಿ ಇಡೀ ಮನೆ ಆವರಿಸಿದೆ. ಬೆಂಕಿಯಲ್ಲಿ ಸಿಲುಕಿ ಬಾಲಕ ಅಗಸ್ತ್ಯ ಪರದಾಡುತ್ತಿದ್ದಾಗ ರಕ್ಷಣೆಗೆ ಬಂದ ತಂದೆ ಚಂದ್ರಕಾಂತ ಅವರಿಗೂ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಬಾಲಕ ಸಾವನಪ್ಪಿದ್ದಾನೆ. ಸದ್ಯ ತಂದೆ ಚಂದ್ರಕಾಂತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recent Articles

spot_img

Related Stories

Share via
Copy link