ಗಾಂಜಾ ಸೇವನೆ :ಓರ್ವನ ಬಂಧನ

ಶಿರಸಿ:

    ಗಾಂಜಾ ಮಾದಕ ವಸ್ತು ಸೇವಿಸಿದ ಬಗ್ಗೆ ವೈಧ್ಯಕೀಯ ಪರೀಕ್ಷೆ ದೃಢಪಟ್ಟ ಹಿನ್ನಲೆಯಲ್ಲಿ ಶಿರಸಿ ನಗರ ಠಾಣೆ ಪೊಲೀಸರು ಇಂದು ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಜರುಗಿದೆ.

    ಶಿರಸಿಯ ಗಣೇಶ ನಗರ ಮಂಜುನಾಥ ಕಾಲೋನಿಯ ನಿವಾಸಿಯಾದ ಶ್ರೀಕಾಂತ ಮಂಜಪ್ಪ ಅಗಸನಹಳ್ಳಿ ಬಂಧಿತ ಆರೋಪಿಯಾಗಿದ್ದಾನೆ. ಶಿರಸಿ ನಗರದ ಆನೆಹೊಂಡದ ಹತ್ತಿರ ಸಿಕ್ಕ ಈತ, ಗಾಂಜಾ ಅಮಲು ಪಧಾರ್ಥ ಸೇವನೆ ಮಾಡಿರುವ ಸಂಶಯದ ಮೇಲೆ ವಶಕ್ಕೆ ಪಡೆದು ನಗರದ ಪಂಡಿತ ಸಾರ್ವಜನಿ‌ಕ ಆಸ್ಪತ್ರೆ ಯಲ್ಲಿ ವೈಧ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದರಿಂದ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,ಉತ್ತರಕನ್ನಡ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳಾದ ದೀಪನ್ ಎಂ ಎನ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ ಕೃಷ್ಣಮೂರ್ತಿ, ಜಗದೀಶ್ ಎಂ,ಹಾಗೂ ಶಿರಸಿ ಉಪವಿಭಾಗದ ಡಿಎಸ್ಪಿ ಶ್ರೀಮತಿ ಗೀತಾ ಪಾಟೀಲ್ ,ವೃತ್ತ ನಿರೀಕ್ಷಕರಾದ ಶಶಿಕಾಂತ ವರ್ಮಾ ರವರ ಮಾರ್ಗದರ್ಶನದಲ್ಲಿ ಶಿರಸಿ ‌ನಗರ ಪೊಲೀಸ್ ಠಾಣೆ ಪಿಎಸ್ಐ ನಾಗಪ್ಪ.ಬಿ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹನುಮಂತ ಮಾಕಾಪುರ, ರಾಮಯ್ಯ ಪೂಜಾರಿ, ಹನುಮಂತ ಕಬಾಡಿ, ಚನ್ನ ಬಸಪ್ಪ ಕ್ಯಾರಕಟ್ಟಿ, ರಾಜಶೇಖರ್ ಅಂಗಡಿ, ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Recent Articles

spot_img

Related Stories

Share via
Copy link