ಕೋರ್ಟ್ ಆದೇಶ ಕೊಟ್ಟರೂ ದರ್ಶನ್​​ಗೆ ಜೈಲಲ್ಲಿ ಸಿಗುತ್ತಿಲ್ಲ ಸೌಲಭ್ಯ

ಬೆಂಗಳೂರು :

   ದರ್ಶನ್ ಅವರಿಗೆ ಜೈಲಿನಲ್ಲಿ ಹಾಸಿಗೆ, ದಿಂಬು, ಬೆಡ್​ಶೀಟ್ ನೀಡುವಂತೆ  ಬೆಂಗಳೂರಿನ ಕೆಳ ಹಂತದ ಕೋರ್ಟ್ ಆದೇಶ ಕೊಟ್ಟಿತ್ತು. ಆದರೆ, ಇದಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ದರ್ಶನ್ ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಹಿಂದಿನ ಸ್ಥಿತಿಯೇ ಮುಂದುವರಿದಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಕೆಳ ಹಂತದ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ.

   ಕೋರ್ಟ್ ಮೊರೆ ಹೋಗಿದ್ದ ದರ್ಶನ್ ಅವರು, ಹೆಚ್ಚುವರಿ ದಿಂಬು, ಹಾಸಿಗೆ ಹಾಗೂ ಬೆಡ್​​ಶೀಟ್​ಗೆ ಮನವಿ ಮಾಡಿದ್ದರು. ಜೊತೆಗೆ ಕೋರ್ಟ್ ಆವರಣದಲ್ಲಿ ವಾಕಿಂಗ್​ಗೂ ಅವಕಾಶ ಕೋರಿದ್ದರು. ಆದರೆ, ಕೋರ್ಟ್ ಆದೇಶವನ್ನು ಅಧಿಕಾರಿಗಳು ಕಡೆಗಣಿಸಿದ್ದಾರೆ ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ.
   ‘ಬೆಳಿಗ್ಗೆ ಮತ್ತು ಸಂಜೆ ಅರ್ಧ ಗಂಟೆ ವಾಕಿಂಗ್​ಗೆ ಅವಕಾಶ ನೀಡಲಾಗಿದೆ. ದು ಬಿಟ್ಟರೆ ಬೇರೆ ಯಾವುದೇ ಸೌಲಭ್ಯ ನೀಡಿಲ್ಲ. ಹಾಸಿಗೆ, ದಿಂಬು, ಬೆಡ್​ಶೀಟ್ ಕೇಳಿದರೂ ನೀಡಿಲ್ಲ.  ಹಿಂದಿನ ಸ್ಥಿತಿಯೇ ಮುಂದುವರಿದಿದೆ. ‌ಕೋರ್ಟ್ ಆದೇಶ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ದರ್ಶನ್ ಪರ ವಕೀಲರು ಕೋರ್ಟ್​ನಲ್ಲಿ ಹೇಳಿದ್ದಾರೆ.

Recent Articles

spot_img

Related Stories

Share via
Copy link