ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧನ ಸಜೀವದಹನ

ಶಹಜಹಾನ್‌ಪುರ

    ಉತ್ತರ ಪ್ರದೇಶದ  ಶಹಜಾನ್​​ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ಅದರಲ್ಲಿ ಮಲಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂತ್ ಪ್ರದೇಶದ ಅಲಿಯಾಪುರ ಗ್ರಾಮದಲ್ಲಿ ದೀರ್ಘಕಾಲದಿಂದ ಅಸ್ವಸ್ಥರಾಗಿದ್ದ ರಾಂಪಾಲ್ ಶ್ರೀವಾಸ್ತವ ಅವರು ಶುಕ್ರವಾರ ರಾತ್ರಿ ಊಟ ಮಾಡಿದ ನಂತರ ತಮ್ಮ ಮನೆಯ ಹೊರಗೆ ನಿರ್ಮಿಸಲಾದ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ.

    ಪೊಲೀಸ್ ಅಧಿಕಾರಿಯ ಪ್ರಕಾರ, ರಾತ್ರಿಯ ಸಮಯದಲ್ಲಿ ಆ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿತು. ಕುಟುಂಬದ ಸದಸ್ಯರು ಈ ವೇಳೆ ಮನೆಯೊಳಗೆ ಮಲಗಿದ್ದರು. ಆದರೆ, ಆ ವೃದ್ಧ ಮನೆಯ ಹೊರಗೆ ಇರುವ ಸಣ್ಣ ಗುಡಿಸಲಿನಲ್ಲಿ ಮಲಗಲು ಹೋಗಿದ್ದರು. ಸಾಮಾನ್ಯವಾಗಿ ಅವರು ಅಲ್ಲೇ ಮಲಗಿದ್ದರು. ಆಗ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಶಬ್ದ ಕೇಳಿ ಮನೆಯವರು ಹೊರಗೆ ಬಂದರು. ಆದರೆ ಬೆಂಕಿ ತೀವ್ರವಾಗಿ ಹರಡಿದ್ದರಿಂದ ಅವರಿಗೆ ಆ ವ್ಯಕ್ತಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. 

    ಬೆಂಕಿಯನ್ನು ನಂದಿಸುವ ಅವರ ಎಲ್ಲಾ ಪ್ರಯತ್ನಗಳು ವಿಫಲವಾದವು. ಇದರಿಂದಾಗಿ ಶ್ರೀವಾಸ್ತವ ಅವರು ಗುಡಿಸಲಿನೊಳಗೆ ಜೀವಂತವಾಗಿ ಸುಟ್ಟುಹೋದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಸುಟ್ಟ ಶವವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬೆಂಕಿಯ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದಿದ್ದಾರೆ. 

    ಅನಾರೋಗ್ಯದ ಕಾರಣದಿಂದ ರಾಂಪಾಲ್ ಶ್ರೀವಾಸ್ತವ ಅವರು ಹಲವಾರು ತಿಂಗಳುಗಳಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಇದರಿಂದಾಗಿ ಅವರು ತುಂಬಾ ದುರ್ಬಲರಾಗಿದ್ದರು. ಕ್ಷಯರೋಗದಿಂದಾಗಿ ಅವರು ಮನೆಯ ಹೊರಗೆ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿತು.

Recent Articles

spot_img

Related Stories

Share via
Copy link