ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಬಿಎಸ್ ಯಡಿಯೂರಪ್ಪ

ಬೆಂಗಳೂರು

      ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ  ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿಂದೆ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್  ಗುರುವಾರ ನಿರಾಕರಿಸಿತ್ತು. ಕೋರ್ಟ್ ಆದೇಶದ ಪ್ರಕಾರ ಇಂದೇ ಯಡಿಯೂರಪ್ಪ ಕೋರ್ಟ್​ಗೆ ಹಾಜರಾಗಬೇಕಿತ್ತು. ಇದೀಗ ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ  ಮೇಲ್ಮನವಿ ಸಲ್ಲಿಸಿದ್ದು, ತಡೆಯಾಜ್ಷೆ ಪಡೆದಿದ್ದಾರೆ.

     ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್​ ಯಡಿಯೂರಪ್ಪ ಅವರ ಅರ್ಜಿ ವಜಾಗೊಳಿಸಿತ್ತು. ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಖುದ್ದು ಕೋರ್ಟ್​ಗೆ ಹಾಜರಾಗಬೇಕಿದ್ದ ಬಿಎಸ್‌ವೈ, ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿದ್ದಾರ್ಥ ಲೂಥ್ರಾ ವಾದಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. 

    ದೂರಿನ ಪ್ರಕಾರ, 2024ರ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ದೂರು ನೀಡಿದ್ದರು. ಸದಾಶಿವನಗರ ಪೊಲೀಸರು ಮಾರ್ಚ್ 14, 2024 ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಹೆಚ್ಚಿನ ತನಿಖೆಗಾಗಿ ಕೇಸನ್ನು ಸಿಐಡಿಗೆ ವರ್ಗಾಯಿಸಲಾಯಿತು. ಸಂಸ್ಥೆಯು ಎಫ್‌ಐಆರ್ ಮರು ದಾಖಲಿಸಿ, ಮಾಜಿ ಸಿಎಂ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತು. ದೂರುದಾರರು ಮತ್ತು ಅವರ ಮಗಳು 2024ರ ಫೆಬ್ರುವರಿಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರನ್ನು ಹಲವು ಬಾರಿ ಭೇಟಿಯಾಗಿದ್ದರು.

Recent Articles

spot_img

Related Stories

Share via
Copy link