ತಿಪಟೂರು :
ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರಿಘಟ್ಟ ಕ್ಷೇತ್ರದ ಶ್ರೀ ಚೌಡೇಶ್ವರಿ ದೇವಿಗೆ ಸುವರ್ಣ ಕಿರೀಟ ಸಮರ್ಪಣಾ ಸಮಾರಂಭವು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ನೆರವೆರಿಸಿದರು.
ದೇವಿಗೆ ಬೆಂಗಳೂರಿನ ಸರ್ಜಾಪುರದ ಡಿ.ಲಕ್ಕಣ್ಣ, ಶಾಂತ ಲಕ್ಕಣ್ಣ ಕುಟುಂಬಸ್ಥರು ಶ್ರೀ ಚೌಡೇಶ್ವರಿ ದೇವಿಗೆ, ಶ್ರೀ ಕರಿಯಮ್ಮ ದೇವಿಯವರಿಗೆ ಸುವರ್ಣ ಕರೀಟವನ್ನು ಸಮರ್ಪಿಸಿದರು.. ಈ ಶುಭ ಸಂದರ್ಭದಲ್ಲಿ ಹೋಮ, ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಪಾದಪೂಜಾ ಕಾರ್ಯಕ್ರಮಗಳು ನೆರವೆರಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಶ್ರೀ ನಾರಾಯಣನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಂಡ್ಯ ಶಾಖಾಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಕಬ್ಬಳಿ ಶಾಖಾಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ದಸರೀಘಟ್ಟ ಶಾಖಾಮಠ ಶ್ರೀ ಚೌಡೇಶ್ವರಿ ದೇವಿ ಶ್ರೀ ಕ್ಷೇತ್ರದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಶಾಸಕ ಬಿ.ಸಿ.ನಾಗೇಶ್ ಸೇರಿದಂತೆ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
