ಹಿರಿಯೂರು :
ಹಿರಿಯೂರಿನ ಇನ್ನರ್ ವೀಲ್ ಕ್ಲಬ್ ವತಿಯಿಂದ ರಕ್ಷಾ ಬಂಧನದ ಪವಿತ್ರ ಹಬ್ಬವನ್ನು ಸಡಗರದಿಂದ ಆಚರಿಸಿದರು. ಇದೇ ಸಂದರ್ಭದಲ್ಲಿ ಇಲ್ಲಿನ ಡಿ.ವೈ.ಎಸ್.ಪಿ ವೆಂಕಟಪ್ಪನಾಯಕರವರಿಗೆ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಸಪ್ನಾ ಸತೀಶ್ ರವರು ರಾಖಿ ಕಟ್ಟುವ ಮೂಲಕ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಇನ್ನರ್ ವೀಲ್ ಕ್ಲಬ್ ನ ಕಾರ್ಯದರ್ಶಿ ಜ್ಞಾನೇಶ್ವರಿ ತಿಪ್ಪೇಸ್ವಾಮಿ ಹಾಗೂ ಸೌಮ್ಯ ಪ್ರಶಾಂತ್ ರವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








