ಶಿಕ್ಷಕರ ಕ್ರೀಡಾಕೂಟಕ್ಕೆ ಚಾಲನೆ : ಶಿಕ್ಷಕರು ಆರೋಗ್ಯವಂತರಾಗಲು ಕ್ರೀಡೆಯಲ್ಲಿ ಹೆಚ್ಚು ಪಾಲ್ಗೊಳ್ಳಿ

ಚಳ್ಳಕೆರೆ

         ಶಿಕ್ಷಕರೂ ಸಹ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಂಡಲ್ಲಿ ಮಾತ್ರ ಯಾವುದೇ ರೀತಿಯ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಸದಾಕಾಲ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಕಡೆ ಗಮನ ನೀಡುವ ಶಿಕ್ಷಕರಿಗೆ ಅವರೂ ಸಹ ಆರೋಗ್ಯವಂತರಾಗಬೇಕಿದೆ. ಈ ಹಿನ್ನೆಲೆಯಲ್ಲಿ ಕ್ರೀಡೆಗಳು ಹೆಚ್ಚು ಸಹಕಾರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ತಿಳಿಸಿದರು.

          ಅವರು, ಶನಿವಾರ ಇಲ್ಲಿನ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಶಿಕ್ಷಕರು ಹಲವಾರು ಕ್ರೀಡೆಗಳನ್ನು ಹಮ್ಮಿಕೊಂಡಿದ್ಧಾರೆ. ಶಿಕ್ಷಕರು ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಬೇಕು, ಪ್ರತಿಯೊಬ್ಬ ಶಿಕ್ಷಕರು ಆಟವನ್ನು ಪ್ರದರ್ಶಿಸುವಾಗ ಎಚ್ಚರಿಕೆ ವಹಿಸಬೇಕು. ಈ ಕ್ರೀಡೆಗಳು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಶುಭ ಹಾರೈಸಿದರು.

         ಪ್ರಾಸ್ತಾವಿಕವಾಗಿ ಮಾತನಾಡಿದ ಬಿಆರ್‍ಸಿ ಮಂಜಪ್ಪ, ಪ್ರತಿವರ್ಷ ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಸಹ ಬೆಳೆಸುತ್ತಾರೆ. ಆದರೆ, ಅವರು ನೇರವಾಗಿ ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದಿಲ್ಲ. ಆದರೆ, ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಈ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲಾ ಶಿಕ್ಷಕರು ಸಹೋದರ ಭಾವನೆಯಿಂದ ಆಟವಾಡಬೇಕೆಂದು ಮನವಿ ಮಾಡಿದರು.

           ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ಎಂ.ತಿಪ್ಪೇಸ್ವಾಮಿ, ಜಿಲ್ಲಾ ಅನುದಾನ ರಹಿತ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ಸೂರನಾಯಕ, ದೈಹಿಕ ಶಿಕ್ಷಣಾಧಿಕಾರಿ ಷಣ್ಮುಖಪ್ಪ, ಸಿಆರ್‍ಪಿ ಎನ್.ಮಾರಣ್ಣ, ಶಿಕ್ಷಕರಾದ ಎನ್.ಮಲ್ಲೇಶ್ ಮುಂತಾದವರು ಉಪಸ್ಥಿತರಿದ್ದರು

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap