ಐ.ಟಿ.ಅಧಿಕಾರಿಗಳ ಭೇಟಿ ಮಾಡಿಲ್ಲ; ಬಿಎಸ್‍ವೈ ಸ್ಪಷ್ಟನೆ

ಬೆಂಗಳೂರು;

              ನನ್ನ ಪುತ್ರ ವಿಜಯೇಂದ್ರ ಅವರು ಆದಾಯ ತೆರಿಗೆ ಅಧಿಕಾರಿಗಳ ಭೇಟಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯಲ್ಲಿ ಹುರುಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‍ವೈ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಐ.ಟಿ.ಅಧಿಕಾರಿಕಾರಿಗಳನ್ನ ನನ್ನ ಮಗ ಭೇಟಿಯಾಗಿದ್ದಾರೆ ಎಂದು ಹೇಳಿಕೆ ನೀಡಿರುವುದು ಶುದ್ಧ ಸುಳ್ಳು, ಏಕೆಂದರೆ, ಐ.ಟಿ. ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಎಂಬುದಕ್ಕೆ ಆ ಅಧಿಕಾರಿಗಳೆ ಅಲ್ಲಗಳೆದಿದ್ದಾರೆ ಎಂದ ಅವರು, ಮುಖ್ಯಮಂತ್ರಿ ಅವರು ಈ ಆರೋಪ ಸಾಬೀತು ಪಡಿಸಿದ್ದೇ ಆದಲ್ಲಿ ನಾನು ರಾಜಕೀಯ ನಿವೃತ್ತಿ ಹೊಂದುವುದಾಗಿ ತಿಳಿಸಿದರು.
ಒಂದು ವೇಳೆ ಸಾಬೀತು ಪಡಿಸಲು ವಿಫಲವಾದಲ್ಲಿ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿ ಅವರ ವಿರುದ್ದ ಮಾನನಷ್ಟ ಮೊಕದ್ದಮ್ಮೆ ಹೂಡಲು ಯೋಚಿಸುವುದಾಗಿ ತಿಳಿಸಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link