ಓಂಕಾರೇಶ್ವರ ಬಡಾವಣೆಯ ಸಮಸ್ಯೆಗಳಿಗೆ ಸ್ಪಂಧಿಸದ ಗ್ರಾ.ಪಂ: ಗ್ರಾಮಸ್ಥರ ಆರೋಪ

ಶಿರಾ:

         ತಾಲ್ಲೂಕಿನ ಪ.ನಾ.ಹಳ್ಳಿಯ ನಾದೂರು ಗ್ರಾಮ ಪಂಚಾಯ್ತಿಗೆ ಸೇರಿದ ಓಂಕಾರೇಶ್ವರ ಬಡಾವಣೆಯು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು ಈ ಕೂಡಲೇ ಇಲ್ಲಿನ ಸಮಸ್ಯೆಗಳಿಗೆ ಸ್ಪಂಧಿಸುವಂತೆ ಇಲ್ಲಿನ ಗ್ರಾಮಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಓಂಕಾರೇಶ್ವರ ಬಡಾವಣೆಯಲ್ಲಿ ಚರಂಡಿಗಳು ಸರಿಯಾಗಿಲ್ಲವಷ್ಟೇ ಅಲ್ಲದೆ ಗ್ರಾಮ ಪಂಚಾಯ್ತಿಯವರು ತುಂಬಿದ ಚರಂಡಿಗಳ ನೈರ್ಮಲ್ಯವನ್ನು ತೆಗೆದು ವರ್ಷಗಳೇ ಉರುಳುತ್ತಿವೆ. ಇಲ್ಲಿನ ರಸ್ತೆಗಳು ಕೂಡಾ ಹದಗೆಟ್ಟಿವೆ. ಅನೈರ್ಮಲ್ಯದಿಂದ ಕೂಡಿದ ಈ ಗ್ರಾಮದಲ್ಲಿ ಸೊಳ್ಳೆಗಳ ಕಾಟದಿಂದ ಜನರ ಆರೋಗ್ಯವೂ ಹದಗೆಡುತ್ತಿದೆ ಎಂದು ಆರೋಪಿಸಲಾಗಿದೆ.

           ಸದರಿ ಬಡಾವಣೆಯ ನೈರ್ಮಲ್ಯ ಕಾಪಾಡುವಂತೆ ಇಲ್ಲಿನ ಗ್ರಾಮ ಪಂಚಾಯ್ತಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
  
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap