ಕೆಟ್ಟ ಮೇಲೆ ಬುದ್ಧಿ ಕಲಿತ ಪಾಕಿಸ್ಥಾನ

ದೆಹಲಿ:

     ಕೆಟ್ಟ ಮೇಲೆ ಬುದ್ಧಿ ಬಂದಂತೆ  ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಗೆ ನಮ್ಮ ದೇಶದ ನೆನಪಿಗೆ ಬಂದಿದೆ ಅವರ ಎರಡು ದಿನದ ಯು ಎ ಇ ಪ್ರವಾಸದಿಂದ ವಾಪಸ್ಸಾದ ಅವರು  ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.  ತಮ್ಮ ಹಾಗು ಭಾರತದ ನಡುವಿನ ದ್ವಿಪಕ್ಷೀಯ ಮಾತುಕತೆ ಪುನಾರಂಭಿಸುವ ಪ್ರಸ್ತಾವನೆ ಇಟ್ಟಿದ್ದಾರೆ.

    ನ್ಯೂಯಾರ್ಕ್ ನಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹ್ಮೂದ್​ ಖುರೇಶಿ ನಡುವೆ ಸಭೆ ನಡೆಸುವ ಬಗ್ಗೆ ಪರಿಶೀಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಎರಡು ದೇಶಗಳ ನಡುವೆ ಅರ್ಥಪೂರ್ಣ ಹಾಗೂ ರಚನಾತ್ಮಕ ಮೈತ್ರಿಯಾಗುವುದನ್ನು ಬಯಸುತ್ತೇನೆ ಎಂಬ ಮೋದಿಯವರ ಮಾತಿಗೆ ಪ್ರತಿಕ್ರಿಯೆಯಾಗಿ ಇಮ್ರಾನ್​ ಖಾನ್​ ಈ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ .

    ವಿವಾದಗಳನ್ನು ಬಗೆಹರಿಸಲು ಭಾರತ ಒಂದು ಹೆಜ್ಜೆ ಮುಂದಿಟ್ಟರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದಿಡುತ್ತದೆ ಎಂದು ಇಮ್ರಾನ್​ ಖಾನ್​ ಪಾಕ್​ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದಾಗ ತಿಳಿಸಿದ್ದರು. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಮಗ್ರ ಮಾತುಕತೆ ನಡೆಸಲು 2015ರಲ್ಲಿ ಪ್ರಯತ್ನಿಸಲಾಗಿತ್ತು.  ಪಠಾಣ್​ಕೋಟ್​ ದಾಳಿ ಹಿನ್ನೆಲೆಯಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು. ಇನ್ನು ಮುಂದಾದರು ಎರಡೂ ರಾಷ್ಟ್ರಗಳು ಮಾತುಕತೆಯ ಭಿನ್ನಾಭಿಪ್ರಾಯಗಳು , ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಖಾನ್​ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link