ಅಕ್ರಮ ಮರಳು ಸಾಗಾಣಿಕೆ ಯತ್ನಿಸಿದ ಲಾರಿ ಪೊಲೀಸರ ವಶದಲ್ಲಿ : ಚಾಲಕ ಮತ್ತು ಮಾಲೀಕನ ಮೇಲೆ ಪ್ರಕರಣ ದಾಖಲು

ಚಳ್ಳಕೆರೆ

       ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಜಿಲ್ಲಾ ರಕ್ಷಣಾಧಿಕಾರಿ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಇಲ್ಲಿನ ಪೊಲೀಸ್ ಇಲಾಖೆ ಸಂಪೂರ್ಣ ನಿಯಂತ್ರಿಸಿದ್ದರೂ ಸಹ ಇಲಾಖೆಯ ಕಣ್ಣು ತಪ್ಪಿಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪೊಲೀಸರು ವಶಪಡಿಸಿಕೊಂಡು ಲಾರಿಯ ಚಾಲಕ ಮತ್ತು ಮಾಲೀಕನ ಮೇಲೆ ಪ್ರಕರಣ ದಾಖಲಿಸಿದ್ಧಾರೆ.

        ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಇಲ್ಲಿನ ಡಿವೈಎಸ್ಪಿ ಎಸ್.ರೋಷನ್ ಜಮೀರ್, ವೃತ್ತ ನಿರೀಕ್ಷಕ ಎನ್.ತಿಮ್ಮಣ್ಣ ಯಲಗಟ್ಟೆ ಗೊಲ್ಲರಹಟ್ಟಿ ಬಳಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪತ್ತೆ ಹಚ್ಚಿ ಪರಿಶೀಲಿಸಿದಾಗ ಯಾವುದೇ ರೀತಿಯ ಮರಳು ಸಾಗಾಟದ ಅನುಮತಿ ಪತ್ರ ಇಲ್ಲದ ಹಿನ್ನೆಲೆಯಲ್ಲಿ ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ಧಾರೆ.

       ತಾಲ್ಲೂಕಿನ ಯಾವುದೇ ಪ್ರದೇಶದಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ವೃತ್ತ ನಿರೀಕ್ಷಕ ಎನ್.ತಿಮ್ಮಣ್ಣ ಮನವಿ ಮಾಡಿದ್ಧಾರೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap