ಬೆಂಗಳೂರು:
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ವ್ಯಕ್ತಿಗತವಾದದ್ದು, ವ್ಯಕ್ತಿಗತವಾದ ಎಲ್ಲರಲ್ಲಿಯೂ ಇರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಹುಬ್ಬಳ್ಳಿ ನಗರದಲ್ಲಿಂದು ಮಾತನಾಡಿದ ಅವರು,ವ್ಯಕ್ತಿಗತವಾದ ಮತಕ್ಕೆ ಪಕ್ಷ ನಿರ್ಣಯ ತೆಗೆದುಕೊಳ್ಳುತ್ತದೆ. ಪಕ್ಷದ ನಿರ್ಣಯಕ್ಕೆ ಎಲ್ಲರ ಸಹಮತವಿರುತ್ತದೆ.ಆದರೆ ಅದು ಅವರ ವೈಯಕ್ತಿಕ ಮತವಾಗಿದೆ.ಈ ವಿಚಾರವನ್ನು ಬೆಳೆಸುವುದು ಸೂಕ್ತವಲ್ಲ. ಇದಕ್ಕೆ ಇಲ್ಲಿಯೇ ಪೂರ್ಣ ವಿರಾಮ ಹೇಳುವುದು ಸೂಕ್ತವಾಗಿದೆ ಎಂದು ಅವರು ಹೇಳಿದರು.
ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ಮಹಿಳೆಯರಿಗೆ ವಿರೋಧಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಮಹಿಳೆಯರ ಮೇಲೆ ಯಾವುದೇ ದೌರ್ಜನ್ಯಗಳಾಗಬಾರದು.ಮಹಿಳೆಯರ ಬಗ್ಗೆ ಗೌರವಿರಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
